23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಂಡಾಜೆ : ಅರೆಕ್ಕಲ್ ನಿವಾಸಿ ಹಿರಿಯ ಕೃಷಿಕ ಇಸ್ಮಾಯಿಲ್ ಹಾಜಿ ಮೂಲೆ ನಿಧನ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಅರೆಕ್ಕಲ್ ನಿವಾಸಿ, ಹಿರಿಯ ಕೃಷಿಕ ಹಾಗೂ ಅಡಿಕೆ ವ್ಯಾಪಾರಿ ಇಸ್ಮಾಯಿಲ್ ಹಾಜಿ ಮೂಲೆ (ಮೂಲೆ ಮೋನು ಹಾಜಿ) ಅವರು ಅಲ್ಪ ಕಾಲದ ಅಸೌಖ್ಯದಿಂದ ಡಿ.30 ರಂದು ನಿಧನರಾಗಿದ್ದಾರೆ‌.


ಮೂಲತಃ ಮಂಗಳೂರು ತಾಲೂಕು ಕೊಣಾಜೆ ಸನಿಹದ ನಡುಪದವು ಮೂಲೆ ನಿವಾಸಿಯಾಗಿರುವ ಅವರು ಅಲ್ಲಿನ ಅಲ್ ಉಮರ್ ಜುಮ್ಮಾ ಮಸೀದಿ ನಡುಪದವು ಕೈರಂಗಳ ಜಮಾಅತಿನ ಮಾಜಿ ಅಧ್ಯಕ್ಷರೂ ಹಿರಿಯ ಸಾಮಾಜಿಕ ಮುಂದಾಳುವೂ ಆಗಿದ್ದರು. ಊರಿನಲ್ಲಿ ಅವರು ಮೂಲೆ ಮೋನು ಹಾಜಿ ಎಂದೇ ಅರಿಯಲ್ಪಡುತ್ತಿದ್ದರು. ನಡುಪದವು ಸರಕಾರಿ ಶಾಲೆಗೆ ಜಾಗ ಮಂಜೂರಾತಿ ಹಾಗೂ ಕಟ್ಟಡ ರಚನೆಗಾಗಿ ಹೋರಾಟ ಮಾಡಿ‌ ಯಶಸ್ವಿ ಯಾಗಿದ್ದರು. ಅವರ‌ ನಿಧನ‌ದ ಗೌರವಾರ್ಥ ಶಾಲೆಗೆ ರಜೆ ಸಾರಿ ಶೋಕ ಆಚರಿಸಲಾಯಿತು.

ಮೃತರು ಪತ್ನಿ ಐಸಮ್ಮ, ಮಕ್ಕಳಾದ ಹಮೀದ್,‌ ಮುಹಮ್ಮದ್, ಕಾಸಿಂ ಮತ್ತು ಏಕೈಕ ಪುತ್ರಿ ಪುತ್ತುಮ್ಮ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.
ಮೃತರ ಮನೆಗೆ ಕರ್ನಾಟಕ ವಿಧಾನ ಸಭೆಯ ಸಭಾಪತಿ ಯು.ಟಿ ಖಾದರ್ ಸಹಿತ ಅನೇಕ ಗಣ್ಯರು ಭೇಟಿ ಮಾಡಿ ಅಂತಿಮ ದರ್ಶನ ಪಡೆದು ಮನೆಯವರಗೆ ಸಾಂತ್ವಾನ ಹೇಳಿದರು.

Related posts

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಮತದಾನ

Suddi Udaya

ಕಲ್ಮಂಜದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ

Suddi Udaya

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೂಟ ಮಹಾ ಜಗತ್ತು ಸಾಲಿಗ್ರಾಮ 70ನೇ ಕೇಂದ್ರೀಯ ಮಹಾಧಿವೇಶನ: ಬೆಳ್ತಂಗಡಿ ಮಹಿಳಾ ವೇದಿಕೆಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!