24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಂಡಾಜೆ : ಅರೆಕ್ಕಲ್ ನಿವಾಸಿ ಹಿರಿಯ ಕೃಷಿಕ ಇಸ್ಮಾಯಿಲ್ ಹಾಜಿ ಮೂಲೆ ನಿಧನ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಅರೆಕ್ಕಲ್ ನಿವಾಸಿ, ಹಿರಿಯ ಕೃಷಿಕ ಹಾಗೂ ಅಡಿಕೆ ವ್ಯಾಪಾರಿ ಇಸ್ಮಾಯಿಲ್ ಹಾಜಿ ಮೂಲೆ (ಮೂಲೆ ಮೋನು ಹಾಜಿ) ಅವರು ಅಲ್ಪ ಕಾಲದ ಅಸೌಖ್ಯದಿಂದ ಡಿ.30 ರಂದು ನಿಧನರಾಗಿದ್ದಾರೆ‌.


ಮೂಲತಃ ಮಂಗಳೂರು ತಾಲೂಕು ಕೊಣಾಜೆ ಸನಿಹದ ನಡುಪದವು ಮೂಲೆ ನಿವಾಸಿಯಾಗಿರುವ ಅವರು ಅಲ್ಲಿನ ಅಲ್ ಉಮರ್ ಜುಮ್ಮಾ ಮಸೀದಿ ನಡುಪದವು ಕೈರಂಗಳ ಜಮಾಅತಿನ ಮಾಜಿ ಅಧ್ಯಕ್ಷರೂ ಹಿರಿಯ ಸಾಮಾಜಿಕ ಮುಂದಾಳುವೂ ಆಗಿದ್ದರು. ಊರಿನಲ್ಲಿ ಅವರು ಮೂಲೆ ಮೋನು ಹಾಜಿ ಎಂದೇ ಅರಿಯಲ್ಪಡುತ್ತಿದ್ದರು. ನಡುಪದವು ಸರಕಾರಿ ಶಾಲೆಗೆ ಜಾಗ ಮಂಜೂರಾತಿ ಹಾಗೂ ಕಟ್ಟಡ ರಚನೆಗಾಗಿ ಹೋರಾಟ ಮಾಡಿ‌ ಯಶಸ್ವಿ ಯಾಗಿದ್ದರು. ಅವರ‌ ನಿಧನ‌ದ ಗೌರವಾರ್ಥ ಶಾಲೆಗೆ ರಜೆ ಸಾರಿ ಶೋಕ ಆಚರಿಸಲಾಯಿತು.

ಮೃತರು ಪತ್ನಿ ಐಸಮ್ಮ, ಮಕ್ಕಳಾದ ಹಮೀದ್,‌ ಮುಹಮ್ಮದ್, ಕಾಸಿಂ ಮತ್ತು ಏಕೈಕ ಪುತ್ರಿ ಪುತ್ತುಮ್ಮ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.
ಮೃತರ ಮನೆಗೆ ಕರ್ನಾಟಕ ವಿಧಾನ ಸಭೆಯ ಸಭಾಪತಿ ಯು.ಟಿ ಖಾದರ್ ಸಹಿತ ಅನೇಕ ಗಣ್ಯರು ಭೇಟಿ ಮಾಡಿ ಅಂತಿಮ ದರ್ಶನ ಪಡೆದು ಮನೆಯವರಗೆ ಸಾಂತ್ವಾನ ಹೇಳಿದರು.

Related posts

ರಾಜ್ಯ ಮಟ್ಟದ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶಕ್ಕೆ ಬೆಳ್ತಂಗಡಿಯಿಂದ 10 ಸಾವಿರ ಕಾರ್ಯಕರ್ತರು ಭಾಗವಹಿಸುವಿಕೆ: ರಕ್ಷಿತ್ ಶಿವರಾಮ್

Suddi Udaya

ಮೇಲಂತಬೆಟ್ಟು : ಕೆಲ್ಲಕೆರೆ ಕೊರಗ ಸಮುದಾಯದ ಕಾಲೋನಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಪೆರಿಂಜೆ : ಪಡ್ಡಾಯಿಬೆಟ್ಟು ನಿವಾಸಿ ಕೃಷಿಕ ವಿಠಲ ಹೆಗ್ಡೆ ನಿಧನ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

Suddi Udaya
error: Content is protected !!