23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಂಡಾಜೆ : ಅರೆಕ್ಕಲ್ ನಿವಾಸಿ ಹಿರಿಯ ಕೃಷಿಕ ಇಸ್ಮಾಯಿಲ್ ಹಾಜಿ ಮೂಲೆ ನಿಧನ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಅರೆಕ್ಕಲ್ ನಿವಾಸಿ, ಹಿರಿಯ ಕೃಷಿಕ ಹಾಗೂ ಅಡಿಕೆ ವ್ಯಾಪಾರಿ ಇಸ್ಮಾಯಿಲ್ ಹಾಜಿ ಮೂಲೆ (ಮೂಲೆ ಮೋನು ಹಾಜಿ) ಅವರು ಅಲ್ಪ ಕಾಲದ ಅಸೌಖ್ಯದಿಂದ ಡಿ.30 ರಂದು ನಿಧನರಾಗಿದ್ದಾರೆ‌.


ಮೂಲತಃ ಮಂಗಳೂರು ತಾಲೂಕು ಕೊಣಾಜೆ ಸನಿಹದ ನಡುಪದವು ಮೂಲೆ ನಿವಾಸಿಯಾಗಿರುವ ಅವರು ಅಲ್ಲಿನ ಅಲ್ ಉಮರ್ ಜುಮ್ಮಾ ಮಸೀದಿ ನಡುಪದವು ಕೈರಂಗಳ ಜಮಾಅತಿನ ಮಾಜಿ ಅಧ್ಯಕ್ಷರೂ ಹಿರಿಯ ಸಾಮಾಜಿಕ ಮುಂದಾಳುವೂ ಆಗಿದ್ದರು. ಊರಿನಲ್ಲಿ ಅವರು ಮೂಲೆ ಮೋನು ಹಾಜಿ ಎಂದೇ ಅರಿಯಲ್ಪಡುತ್ತಿದ್ದರು. ನಡುಪದವು ಸರಕಾರಿ ಶಾಲೆಗೆ ಜಾಗ ಮಂಜೂರಾತಿ ಹಾಗೂ ಕಟ್ಟಡ ರಚನೆಗಾಗಿ ಹೋರಾಟ ಮಾಡಿ‌ ಯಶಸ್ವಿ ಯಾಗಿದ್ದರು. ಅವರ‌ ನಿಧನ‌ದ ಗೌರವಾರ್ಥ ಶಾಲೆಗೆ ರಜೆ ಸಾರಿ ಶೋಕ ಆಚರಿಸಲಾಯಿತು.

ಮೃತರು ಪತ್ನಿ ಐಸಮ್ಮ, ಮಕ್ಕಳಾದ ಹಮೀದ್,‌ ಮುಹಮ್ಮದ್, ಕಾಸಿಂ ಮತ್ತು ಏಕೈಕ ಪುತ್ರಿ ಪುತ್ತುಮ್ಮ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.
ಮೃತರ ಮನೆಗೆ ಕರ್ನಾಟಕ ವಿಧಾನ ಸಭೆಯ ಸಭಾಪತಿ ಯು.ಟಿ ಖಾದರ್ ಸಹಿತ ಅನೇಕ ಗಣ್ಯರು ಭೇಟಿ ಮಾಡಿ ಅಂತಿಮ ದರ್ಶನ ಪಡೆದು ಮನೆಯವರಗೆ ಸಾಂತ್ವಾನ ಹೇಳಿದರು.

Related posts

ಶಿರ್ಲಾಲು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಎಸ್ .ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ 10ನೇ ಸ್ಥಾನ ಪಡೆದ ತ್ರಿಷಾ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

Suddi Udaya

ಭಜನೆಯಿಂದ ಸಾಮಾಜಿಕ ಸಾಮರಸ್ಯ: ಪ್ರೊ. ಶುಭಾ ಮರವಂತೆ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಧರೆ ಕುಸಿತ : ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿಯುವ ಸಾಧ್ಯತೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ಅಂಗವಾಗಿ ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್‌ಕಾಲೇಜಿನಲ್ಲಿ ಸರಣಿ ಕಾರ್ಯಕ್ರಮಗಳು

Suddi Udaya
error: Content is protected !!