23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಂಡಾಜೆ : ಅರೆಕ್ಕಲ್ ನಿವಾಸಿ ಹಿರಿಯ ಕೃಷಿಕ ಇಸ್ಮಾಯಿಲ್ ಹಾಜಿ ಮೂಲೆ ನಿಧನ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಅರೆಕ್ಕಲ್ ನಿವಾಸಿ, ಹಿರಿಯ ಕೃಷಿಕ ಹಾಗೂ ಅಡಿಕೆ ವ್ಯಾಪಾರಿ ಇಸ್ಮಾಯಿಲ್ ಹಾಜಿ ಮೂಲೆ (ಮೂಲೆ ಮೋನು ಹಾಜಿ) ಅವರು ಅಲ್ಪ ಕಾಲದ ಅಸೌಖ್ಯದಿಂದ ಡಿ.30 ರಂದು ನಿಧನರಾಗಿದ್ದಾರೆ‌.


ಮೂಲತಃ ಮಂಗಳೂರು ತಾಲೂಕು ಕೊಣಾಜೆ ಸನಿಹದ ನಡುಪದವು ಮೂಲೆ ನಿವಾಸಿಯಾಗಿರುವ ಅವರು ಅಲ್ಲಿನ ಅಲ್ ಉಮರ್ ಜುಮ್ಮಾ ಮಸೀದಿ ನಡುಪದವು ಕೈರಂಗಳ ಜಮಾಅತಿನ ಮಾಜಿ ಅಧ್ಯಕ್ಷರೂ ಹಿರಿಯ ಸಾಮಾಜಿಕ ಮುಂದಾಳುವೂ ಆಗಿದ್ದರು. ಊರಿನಲ್ಲಿ ಅವರು ಮೂಲೆ ಮೋನು ಹಾಜಿ ಎಂದೇ ಅರಿಯಲ್ಪಡುತ್ತಿದ್ದರು. ನಡುಪದವು ಸರಕಾರಿ ಶಾಲೆಗೆ ಜಾಗ ಮಂಜೂರಾತಿ ಹಾಗೂ ಕಟ್ಟಡ ರಚನೆಗಾಗಿ ಹೋರಾಟ ಮಾಡಿ‌ ಯಶಸ್ವಿ ಯಾಗಿದ್ದರು. ಅವರ‌ ನಿಧನ‌ದ ಗೌರವಾರ್ಥ ಶಾಲೆಗೆ ರಜೆ ಸಾರಿ ಶೋಕ ಆಚರಿಸಲಾಯಿತು.

ಮೃತರು ಪತ್ನಿ ಐಸಮ್ಮ, ಮಕ್ಕಳಾದ ಹಮೀದ್,‌ ಮುಹಮ್ಮದ್, ಕಾಸಿಂ ಮತ್ತು ಏಕೈಕ ಪುತ್ರಿ ಪುತ್ತುಮ್ಮ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.
ಮೃತರ ಮನೆಗೆ ಕರ್ನಾಟಕ ವಿಧಾನ ಸಭೆಯ ಸಭಾಪತಿ ಯು.ಟಿ ಖಾದರ್ ಸಹಿತ ಅನೇಕ ಗಣ್ಯರು ಭೇಟಿ ಮಾಡಿ ಅಂತಿಮ ದರ್ಶನ ಪಡೆದು ಮನೆಯವರಗೆ ಸಾಂತ್ವಾನ ಹೇಳಿದರು.

Related posts

ಹೊಂಬೆಳಕು ಕಾರ್ಯಕ್ರಮದಲ್ಲಿ ಉಜಿರೆ ಪಂ.ಅ.ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಸನ್ಮಾನ

Suddi Udaya

ಉಜಿರೆ : ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ವಾರ್ಷಿಕ ಕಾರ್ಯಚುಟುವಟಿಕೆಗಳ ಸಮಾರೋಪ

Suddi Udaya

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ: ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

Suddi Udaya

ಗುತ್ತಿನಬೈಲು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!