23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಂಡಾಜೆ : ಅರೆಕ್ಕಲ್ ನಿವಾಸಿ ಹಿರಿಯ ಕೃಷಿಕ ಇಸ್ಮಾಯಿಲ್ ಹಾಜಿ ಮೂಲೆ ನಿಧನ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಅರೆಕ್ಕಲ್ ನಿವಾಸಿ, ಹಿರಿಯ ಕೃಷಿಕ ಹಾಗೂ ಅಡಿಕೆ ವ್ಯಾಪಾರಿ ಇಸ್ಮಾಯಿಲ್ ಹಾಜಿ ಮೂಲೆ (ಮೂಲೆ ಮೋನು ಹಾಜಿ) ಅವರು ಅಲ್ಪ ಕಾಲದ ಅಸೌಖ್ಯದಿಂದ ಡಿ.30 ರಂದು ನಿಧನರಾಗಿದ್ದಾರೆ‌.


ಮೂಲತಃ ಮಂಗಳೂರು ತಾಲೂಕು ಕೊಣಾಜೆ ಸನಿಹದ ನಡುಪದವು ಮೂಲೆ ನಿವಾಸಿಯಾಗಿರುವ ಅವರು ಅಲ್ಲಿನ ಅಲ್ ಉಮರ್ ಜುಮ್ಮಾ ಮಸೀದಿ ನಡುಪದವು ಕೈರಂಗಳ ಜಮಾಅತಿನ ಮಾಜಿ ಅಧ್ಯಕ್ಷರೂ ಹಿರಿಯ ಸಾಮಾಜಿಕ ಮುಂದಾಳುವೂ ಆಗಿದ್ದರು. ಊರಿನಲ್ಲಿ ಅವರು ಮೂಲೆ ಮೋನು ಹಾಜಿ ಎಂದೇ ಅರಿಯಲ್ಪಡುತ್ತಿದ್ದರು. ನಡುಪದವು ಸರಕಾರಿ ಶಾಲೆಗೆ ಜಾಗ ಮಂಜೂರಾತಿ ಹಾಗೂ ಕಟ್ಟಡ ರಚನೆಗಾಗಿ ಹೋರಾಟ ಮಾಡಿ‌ ಯಶಸ್ವಿ ಯಾಗಿದ್ದರು. ಅವರ‌ ನಿಧನ‌ದ ಗೌರವಾರ್ಥ ಶಾಲೆಗೆ ರಜೆ ಸಾರಿ ಶೋಕ ಆಚರಿಸಲಾಯಿತು.

ಮೃತರು ಪತ್ನಿ ಐಸಮ್ಮ, ಮಕ್ಕಳಾದ ಹಮೀದ್,‌ ಮುಹಮ್ಮದ್, ಕಾಸಿಂ ಮತ್ತು ಏಕೈಕ ಪುತ್ರಿ ಪುತ್ತುಮ್ಮ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.
ಮೃತರ ಮನೆಗೆ ಕರ್ನಾಟಕ ವಿಧಾನ ಸಭೆಯ ಸಭಾಪತಿ ಯು.ಟಿ ಖಾದರ್ ಸಹಿತ ಅನೇಕ ಗಣ್ಯರು ಭೇಟಿ ಮಾಡಿ ಅಂತಿಮ ದರ್ಶನ ಪಡೆದು ಮನೆಯವರಗೆ ಸಾಂತ್ವಾನ ಹೇಳಿದರು.

Related posts

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

Suddi Udaya

ಜು.2: ಪೆರಾಡಿ ಪ್ರಾ.ಕೃ.ಪ. ಸ. ಸಂಘ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಶಿಬಿರ, ಉಚಿತ ದಂತ ಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿಯಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ: ಕ್ರಿಸ್ಮಸ್ ಹಾಗೂ ಹೊಸ ವರುಷದ ಪ್ರಯುಕ್ತ ವಿಶೇಷ ರಿಯಾಯಿತಿ : ಕೆಲವೇ ದಿನಗಳು ಮಾತ್ರ

Suddi Udaya

ಬೆಳ್ತಂಗಡಿ ಬಂಟರ ಸಂಘದ ಖಾಯಂ ಆಹ್ವಾನಿತರ, ನಿರ್ದೇಶಕ ಮಂಡಳಿ ಸಭೆ

Suddi Udaya

ನೈನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ವತಿಯಿಂದ ಪುಸ್ತಕ ವಿತರಣೆ, ಅನಾರೋಗ್ಯ ಪೀಡಿತರಿಗೆ ಸಹಾಯಧನ ಹಾಗೂ ಉನ್ನತ ಶಿಕ್ಷಣಕ್ಕೆ ಸಹಾಯಧನ ವಿತರಣೆ

Suddi Udaya

ನಡ : 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!