25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಂಡಾಜೆ : ಅರೆಕ್ಕಲ್ ನಿವಾಸಿ ಹಿರಿಯ ಕೃಷಿಕ ಇಸ್ಮಾಯಿಲ್ ಹಾಜಿ ಮೂಲೆ ನಿಧನ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಅರೆಕ್ಕಲ್ ನಿವಾಸಿ, ಹಿರಿಯ ಕೃಷಿಕ ಹಾಗೂ ಅಡಿಕೆ ವ್ಯಾಪಾರಿ ಇಸ್ಮಾಯಿಲ್ ಹಾಜಿ ಮೂಲೆ (ಮೂಲೆ ಮೋನು ಹಾಜಿ) ಅವರು ಅಲ್ಪ ಕಾಲದ ಅಸೌಖ್ಯದಿಂದ ಡಿ.30 ರಂದು ನಿಧನರಾಗಿದ್ದಾರೆ‌.


ಮೂಲತಃ ಮಂಗಳೂರು ತಾಲೂಕು ಕೊಣಾಜೆ ಸನಿಹದ ನಡುಪದವು ಮೂಲೆ ನಿವಾಸಿಯಾಗಿರುವ ಅವರು ಅಲ್ಲಿನ ಅಲ್ ಉಮರ್ ಜುಮ್ಮಾ ಮಸೀದಿ ನಡುಪದವು ಕೈರಂಗಳ ಜಮಾಅತಿನ ಮಾಜಿ ಅಧ್ಯಕ್ಷರೂ ಹಿರಿಯ ಸಾಮಾಜಿಕ ಮುಂದಾಳುವೂ ಆಗಿದ್ದರು. ಊರಿನಲ್ಲಿ ಅವರು ಮೂಲೆ ಮೋನು ಹಾಜಿ ಎಂದೇ ಅರಿಯಲ್ಪಡುತ್ತಿದ್ದರು. ನಡುಪದವು ಸರಕಾರಿ ಶಾಲೆಗೆ ಜಾಗ ಮಂಜೂರಾತಿ ಹಾಗೂ ಕಟ್ಟಡ ರಚನೆಗಾಗಿ ಹೋರಾಟ ಮಾಡಿ‌ ಯಶಸ್ವಿ ಯಾಗಿದ್ದರು. ಅವರ‌ ನಿಧನ‌ದ ಗೌರವಾರ್ಥ ಶಾಲೆಗೆ ರಜೆ ಸಾರಿ ಶೋಕ ಆಚರಿಸಲಾಯಿತು.

ಮೃತರು ಪತ್ನಿ ಐಸಮ್ಮ, ಮಕ್ಕಳಾದ ಹಮೀದ್,‌ ಮುಹಮ್ಮದ್, ಕಾಸಿಂ ಮತ್ತು ಏಕೈಕ ಪುತ್ರಿ ಪುತ್ತುಮ್ಮ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.
ಮೃತರ ಮನೆಗೆ ಕರ್ನಾಟಕ ವಿಧಾನ ಸಭೆಯ ಸಭಾಪತಿ ಯು.ಟಿ ಖಾದರ್ ಸಹಿತ ಅನೇಕ ಗಣ್ಯರು ಭೇಟಿ ಮಾಡಿ ಅಂತಿಮ ದರ್ಶನ ಪಡೆದು ಮನೆಯವರಗೆ ಸಾಂತ್ವಾನ ಹೇಳಿದರು.

Related posts

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

Suddi Udaya

ನ.4: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಾಲೆಗಳಿಗೆ ಪೀಠೋಪಕರಣಗಳ ಸಾಗಾಟ ವಾಹನಗಳ ಚಾಲನೆ

Suddi Udaya

ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳಾಲಿನಲ್ಲಿ ಎಸ್ ಡಿ ಎಂ ಎನ್ ಎಸ್ ಎಸ್ ಶಿಬಿರದ ಸಮಾರೋಪ

Suddi Udaya
error: Content is protected !!