26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಶ್ರೀ  ಧ.ಮಂ. ಎಂಜಿನೀಯರಿಂಗ್ ಕಾಲೇಜಿನಲ್ಲಿ ಪ.ಪೂ. ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಿಜ್ಞಾನ ಮೇಳ “ಎಕ್ಸ್ ಪೀರಿಯ-2023

ಉಜಿರೆ: ವಿಜ್ಞಾನವೇ  ಎಲ್ಲ ಶಿಕ್ಷಣದ ಭದ್ರ ತಳಪಾಯ.  ಶಿಕ್ಷಣದ ಜತೆಗೆ ಜ್ಞಾನ ಸಂಪಾದನೆಯೇ  ಬದುಕಿನ ಶ್ರೇಷ್ಠ ಸಂಪತ್ತು.  ವಿದ್ಯಾರ್ಥಿ ಜೀವನದಲ್ಲಿ ಲಭ್ಯ ಎಲ್ಲ ಜ್ಞಾನವನ್ನೂ  ಅರಗಿಸಿಕೊಂಡು ಅಪೂರ್ವ ಅವಕಾಶವನ್ನು ಸದ್ವಿನಿಯೋಗಪಡಿಸಿಕೊಳ್ಳಬೇಕು.  ಎಸ್ ಡಿ.ಎಂ. ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ  ಪಠ್ಯ ಹಾಗು ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿ  ಸೃಜನಶೀಲ  ಅಭಿರುಚಿ,ಹವ್ಯಾಸಗಳನ್ನು ಪೋಷಿಸಿ ,ಬೆಳೆಸುತ್ತಿದೆ.  ಕೇಂದ್ರ ಸರಕಾರ  ವಿಶೇಷ ಅಧ್ಯಯನ ಹಾಗೂ ಸಂಶೋಧನೆಗಳಿಗೆ ಪ್ರಾಧಾನ್ಯತೆ ನೀಡುತ್ತಿದೆ .ವಿದ್ಯಾರ್ಥಿಗಳು ಭವಿಷ್ಯದ ಬಗೆಗೆ  ಸಮರ್ಪಕ ನಿರ್ಧಾರ ತೆಗೆದುಕೊಂಡು  ಸರಿದಾರಿಯಲ್ಲಿ ಮುನ್ನಡೆಯಬೇಕು ಎಂದು ಸುರತ್ಕಲ್ ನ ದ.ಕ. ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ  ನಿರ್ದೇಶಕ  ರಾಜೇಂದ್ರ ಕಲ್ಬಾವಿ ಹೇಳಿದರು.

ಅವರು ಡಿ 29 ರಂದು  ಉಜಿರೆಯ ಶ್ರೀ  ಧರ್ಮಸ್ಥಳ ಮಂಜುನಾಥೇಶ್ವರ ಎಂಜಿನೀಯರಿಂಗ್ ಕಾಲೇಜಿನಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಎರಡು ದಿನದ ರಾಜ್ಯ ಮಟ್ಟದ ವಿಜ್ಞಾನ ಮೇಳ “ಎಕ್ಸ್ ಪೀರಿಯ -2023 “ವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಅಧ್ಯಕ್ಷತೆ ವಹಿಸಿದ್ದ ಎಸ್ ಡಿ.ಎಂ.ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ|ಸತೀಶ್ಚಂದ್ರ ಎಸ್ . ಅವರು ಸಮ್ಯಕ್ ದರ್ಶನ,ಸಮ್ಯಕ್ ಜ್ಞಾನ ಮತ್ತು ಸಮ್ಯಕ್ ಚಾರಿತ್ರ್ಯದಿಂದ  ಸಮರ್ಪಣಾ ಭಾವ ಮತ್ತು ಪರಿಶ್ರಮದ  ಶಿಕ್ಷಣ ಅಧ್ಯಯನದಿಂದ  ಬದುಕಿನಲ್ಲಿ ಎತ್ತರದ ಗುರಿ ತಲುಪಲು ಸಾಧ್ಯ. ವಿದ್ಯಾರ್ಥಿಗಳು  ಉನ್ನತ ಗುರಿ ಹೊಂದಿ ಅದರ ಸಾಧನೆಯ ಗೆಲುವಿಗೆ  ನಿರಂತರ ಪರಿಶ್ರಮಪಡಬೇಕು ಎಂದರು.                                                                 

ಸ್ವಾಗತಿಸಿ,ಪ್ರಸ್ತಾವಿಸಿದ ಕಾಲೇಜು ಪ್ರಾಚಾರ್ಯ ಡಾ!ಅಶೋಕ್ ಕುಮಾರ್ ಟಿ.   ಎರಡು ದಿನಗಳ ರಾಜ್ಯ ಮಟ್ಟದ ವಿಜ್ಞಾನ ಮೇಳದಲ್ಲಿ  ರಸಪ್ರಶ್ನೆ,ಗಣಿತ ಒಗಟು,ಹ್ಯಾಕಥಾನ್,ವಿಜ್ಞಾನ ಮಾದರಿ ತಯಾರಿ,ಟ್ರೆಶರ್ ಹಂಟ್ ಮುಂತಾದ ಸ್ಪರ್ಧೆಗಳ ಜತೆಗೆ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು  ಅದರ ಪ್ರಯೋಜನ ಪಡೆಯಲಿದ್ದಾರೆ ಎಂದರು.                                                               

ಪೂರ್ಣಿಮಾ ಜೈನ್ ಮತ್ತು ಮನಿಷಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಸಂಯೋಜಕ ,ಸಿವಿಲ್ ಎಂಜಿನೀಯರಿಂಗ್ ವಿಭಾಗ ಮುಖ್ಯಸ್ಥ ಡಾ!ರವೀಶ್ ಪಿ.ವಂದಿಸಿದರು.       

Related posts

ನೆರಿಯ ಹಿಂದೂ ರುದ್ರಭೂಮಿಗೆ ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸಿದ ತಹಶೀಲ್ದಾರರು: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

Suddi Udaya

ಇಂದಬೆಟ್ಟು: ಕಲ್ಲಾಜೆ ಗಂಪದಕೋಡಿ ನಿವಾಸಿ ವಜ್ರಾಕ್ಷ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

Suddi Udaya

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಅಂಗಾಂಗ ದಾನ ನೋಂದಾವಣೆ ಕಾರ್ಯಕ್ರಮ ಮುಂದೂಡಿಕೆ

Suddi Udaya
error: Content is protected !!