37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರಿಂದ ತೋಡಿನ ಹೂಳೆತ್ತುವ ಕಾರ್ಯಕ್ರಮ

ತಣ್ಣೀರುಪಂತ ಗ್ರಾಮ ಪಂಚಾಯತ್ ಕರಾಯ ಗ್ರಾಮದ ಪೂಂಜಾಳ ಎಂಬಲ್ಲಿ ಮಹಾತ್ಮ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕುಪ್ಪೆಟ್ಟಿ ನದಿಗೆ ಸೇರುವ ತೋಡಿನ ಹೂಳೆತ್ತುವ ಕಾಮಗಾರಿಯಲ್ಲಿ ತಣ್ಣೀರುಪಂತ ಗ್ರಾಮ ಪಂಚಾಯತ್ ಮಟ್ಟದ ಶ್ರೀ ಲಕ್ಷ್ಮೀ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು ಮತ್ತು ಅಲ್ಲಿನ ನಿವಾಸಿಗಳು ಭಾಗಿಯಾಗಿದ್ದಾರೆ ಈಗಾಗಲೇ 150ಮೀ ನಷ್ಟು ತೋಡಿನ ಹೂಳೆತ್ತಲಾಗಿದೆ.

ಶ್ರೀ ಲಕ್ಷ್ಮೀ ಸಂಜೀವಿನಿ ಮಹಿಳಾ ಸ್ವಸಹಾಯ ಸಂಘದ ಪೂಂಜಾಳ ಇದರ ಸದಸ್ಯರುಗಳಾದ
ಸವಿತ, ಮೋಹಿನಿ, ಬಬಿತ,ಸುಂದರಿ, ಹೇಮಾವತಿ, ಭವಾನಿ,ಶ್ರೀಮತಿ, ಕಲಾವತಿ,ದೇವಕಿ, ದಯಾ,ಮಮತ, ಇಂದಿರಾ, ಧರ್ಣಮ್ಮ, ಕಮಲಾಕ್ಷಿ, ಗಿರಿಧರ, ಗಣೇಶ, ಕೃಷ್ಣಪ್ಪ,ಕೀರ್ತನ್, ಹರಿಪ್ರಸಾದ್, ಧರ್ಣಮ್ಮ, ಸುಂದರಿ, ಶ್ರೀಮತಿ, ವಿಜೇತ್ ಕುಮಾರ್ ಪಿ ಲೀಲಾವತಿ ತೋಡಿನ ಹೂಳೆತ್ತುವ ಕಾಮಗಾರಿಯಲ್ಲಿ ಭಾಗಿಯಾಗಿದ್ದಾರೆ.

ಕಾಮಗಾರಿ ನಡೆಯುತ್ತಿರುವ ವೇಳೆ ಪ್ರಭಾರ ಅಭಿವೃದ್ಧಿ ಅಧಿಕಾರಿ ಶ್ರವಣ್, ತಾಂತ್ರಿಕ ಸಹಾಯಕ ಅಭಿಯಂತರರು ಶರಣ್ ರೈ ಕಾಮಗಾರಿ ಪರಿಶೀಲಿಸಿದರು. ಈ ಸಂದರ್ಭ ತಾಲೂಕು ಐಇಸಿ ಸಂಯೋಜಕರು ವಿನಿಷ, ನರೇಗಾ ಸಿಬ್ಬಂದಿ ಪ್ರಸಾದ್ ಉಪಸ್ಥಿತರಿದ್ದರು.

Related posts

ಲಾಯಿಲ : ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪಿಲಿ ನಲಿಕೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಭೂಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ಲಾಯಿಲ ನಿವಾಸಿ ಗಣೇಶ್ ಬಿ.ಎಲ್ ಮೇ.2 ರಂದು ಸೇವಾ ನಿವೃತ್ತಿ

Suddi Udaya

ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Suddi Udaya

ಧರ್ಮಸ್ಥಳ : ಅಸಹಜ ಸಾವು ಪ್ರಕರಣ : ಮಾಸಾಂತ್ಯಕ್ಕೆ ಎಸ್‌ಐಟಿ ಯಿಂದ ವರದಿ ಸಲ್ಲಿಕೆ

Suddi Udaya

ಬೆಳ್ತಂಗಡಿ: ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ ಎಸ್‌ಡಿಪಿಐ ಕುವೆಟ್ಟು ಬ್ಲಾಕ್ ಸಮಾಗಮ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!