23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

ಬೆಳ್ತಂಗಡಿ: ಕುವೆಂಪು ಅವರು ಮಾನವ ಪ್ರೇಮವನ್ನು ಜಗತ್ತಿಗೆ ಸಾರಿ ಜನರಲ್ಲಿ ವೈಚಾರಿಕತೆಯನ್ನು ಮೂಡಿಸಿದ ಮಹಾನ್ ಕವಿಯಾಗಿದ್ದಾರೆ ಎಂದು ವಾಣಿ ಕಾಲೇಜಿನ ಕನ್ನಡ ಉಪನ್ಯಾಸಕ ಬೆಳಿಯಪ್ಪ ಕೆ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಯುಗದ ಕವಿ, ಜಗದ ಕವಿ ಎನಿಸಿಕೊಂಡ ಕುವೆಂಪು ನವೋದಯ ಸಾಹಿತ್ಯ ಪರಂಪರೆಯಲ್ಲಿ ಕೃಷಿ ಮಾಡಿದವರು. ಮಾನವ ಜಾತಿ ಮತ ವಿಕಾರಗಳಿಂದ ದೂರವಿರಬೇಕು. ಪ್ರತಿಯೊಬ್ಬರೂ ಪ್ರಕೃತಿಯನ್ನು ಪ್ರೀತಿಸಿ ಆರಾಧಿಸಬೇಕು. ಇದರಿಂದ ಮಾನವ ಕುಲದ ಉಳಿಯುವಿಕೆ ಸಾಧ್ಯ. ವಿಶ್ವಸಾಹಿತ್ಯಕ್ಕೆ ಕನ್ನಡ ಸಾಹಿತ್ಯದ ಮೂಲಕ ಕುವೆಂಪು ಅಗಾಧವಾದ ಕೊಡುಗೆಯನ್ನು ನೀಡಿದ್ದಾರೆ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಿ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ ಉಪಸ್ಥಿತರಿದ್ದರು. ಕಾಲೇಜಿನ ಕನ್ನಡ ಸಂಘದ ಸಹಸಂಯೋಜಕ ವಿನೀಶ್ ಕೆ ಸ್ವಾಗತಿಸಿದರು. ಕು| ನಿಶಾ ಧನ್ಯವಾದ ಸಲ್ಲಿಸಿದರು. ಕು| ಸನುಷಾ ಪಿಂಟೋ ಕಾರ್ಯಕ್ರಮ ನಿರೂಪಿಸಿದರು.

Related posts

ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಗೆ ಆಯ್ಕೆ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ತoಬಿಲ ಸೇವೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಪೋಸೋಲಿಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ

Suddi Udaya
error: Content is protected !!