25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

ಬೆಳ್ತಂಗಡಿ: ಕುವೆಂಪು ಅವರು ಮಾನವ ಪ್ರೇಮವನ್ನು ಜಗತ್ತಿಗೆ ಸಾರಿ ಜನರಲ್ಲಿ ವೈಚಾರಿಕತೆಯನ್ನು ಮೂಡಿಸಿದ ಮಹಾನ್ ಕವಿಯಾಗಿದ್ದಾರೆ ಎಂದು ವಾಣಿ ಕಾಲೇಜಿನ ಕನ್ನಡ ಉಪನ್ಯಾಸಕ ಬೆಳಿಯಪ್ಪ ಕೆ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಯುಗದ ಕವಿ, ಜಗದ ಕವಿ ಎನಿಸಿಕೊಂಡ ಕುವೆಂಪು ನವೋದಯ ಸಾಹಿತ್ಯ ಪರಂಪರೆಯಲ್ಲಿ ಕೃಷಿ ಮಾಡಿದವರು. ಮಾನವ ಜಾತಿ ಮತ ವಿಕಾರಗಳಿಂದ ದೂರವಿರಬೇಕು. ಪ್ರತಿಯೊಬ್ಬರೂ ಪ್ರಕೃತಿಯನ್ನು ಪ್ರೀತಿಸಿ ಆರಾಧಿಸಬೇಕು. ಇದರಿಂದ ಮಾನವ ಕುಲದ ಉಳಿಯುವಿಕೆ ಸಾಧ್ಯ. ವಿಶ್ವಸಾಹಿತ್ಯಕ್ಕೆ ಕನ್ನಡ ಸಾಹಿತ್ಯದ ಮೂಲಕ ಕುವೆಂಪು ಅಗಾಧವಾದ ಕೊಡುಗೆಯನ್ನು ನೀಡಿದ್ದಾರೆ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಿ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ ಉಪಸ್ಥಿತರಿದ್ದರು. ಕಾಲೇಜಿನ ಕನ್ನಡ ಸಂಘದ ಸಹಸಂಯೋಜಕ ವಿನೀಶ್ ಕೆ ಸ್ವಾಗತಿಸಿದರು. ಕು| ನಿಶಾ ಧನ್ಯವಾದ ಸಲ್ಲಿಸಿದರು. ಕು| ಸನುಷಾ ಪಿಂಟೋ ಕಾರ್ಯಕ್ರಮ ನಿರೂಪಿಸಿದರು.

Related posts

ಎಳನೀರು ಅರಣ್ಯ ಪ್ರದೇಶದಲ್ಲಿ ಬೆಂಕಿ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya

ಕೊಯ್ಯೂರು: ದೇವಸ ಬಾಬು ಗೌಡ ನಿಧನ

Suddi Udaya

ಉಜಿರೆ ಗೌಸಿಯ ಯಂಗ್ ಮೆನ್ಸ್ ನ ನೂತನ ಅಧ್ಯಕ್ಷರಾಗಿ ಸಯ್ಯದ್ ಝೈನುದ್ದೀನ್ ಹಾಗೂ ಕಾರ್ಯದರ್ಶಿಯಾಗಿ ಇಕ್ಬಾಲ್ ಉಜಿರೆ ಆಯ್ಕೆ

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ -ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ತೃತೀಯ ಸ್ಥಾನ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya
error: Content is protected !!