March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

ಬೆಳ್ತಂಗಡಿ: ನಂಬರ್ ಪ್ಲೇಟ್ ಇಲ್ಲದ ಬೈಕೊಂದು ಹೊತ್ತಿ ಉರಿದ ಘಟನೆ ಬೆಳ್ತಂಗಡಿ ತಾಲೂಕಿನ ಚರ್ಚ್ ರೋಡ್ ಬಳಿ ಡಿ 31 ರಂದು ಮಧ್ಯಾಹ್ನ ನಡೆದಿದೆ.

ಬೆಳ್ತಂಗಡಿ ಚರ್ಚ್ ರೋಡ್ ನ ಸೈಂಟ್ ತೆರೇಸಾ ಹೈಸ್ಕೂಲು ಎದುರು ರಸ್ತೆಯಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೈಕೊಂದು ಹೊತ್ತಿ ಉರಿಯುತಿದ್ದು ಇದನ್ನು ಗಮನಿಸಿದ ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಿದ್ದಾರೆ.

ಅದರೆ ಬೈಕ್ ನ ವಾರೀಸುದಾರರು ಯಾರೂ ಅಲ್ಲಿ ಇರಲಿಲ್ಲ ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ಸ್ಥಳೀಯರು ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.ಸ್ಥಳದಲ್ಲಿ ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ ಮೂಡಿದ್ದು ಎಲ್ಲಿಂದಲೋ ನಂಬರ್ ಪ್ಲೇಟ್ ತೆಗೆದು ಬೈಕ್ ಕದ್ದು ತರುವ ವೇಳೆ ಬೆಂಕಿ ಕಾಣಿಸಿಕೊಂಡಿದ್ದು ಈ ಸಮಯದಲ್ಲಿ ಬೈಕ್ ಅಲ್ಲೆ ಬಿಟ್ಟು ಪರಾರಿಯಾಗಿರಬಹುದು ಅಥವಾ ಏನಾದರೂ ಗಾಯಗಳಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬೈಕ್ ಬಿಟ್ಟು ತೆರಳಿರುವ ಬಗ್ಗೆಯೂ   ಅನುಮಾನಿಸಲಾಗಿದೆ.

ಒಂದು ವಾರಗಳ ಹಿಂದೆ ಬೈಕೊಂದು ಕಳ್ಳತನವಾಗಿದ್ದು ಅದೇ ಬೈಕ್ ಆಗಿರಬಹುದೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತಿದ್ದಾರೆ.

Related posts

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ದಿನಕರ್ ತೂಗುದೀಪ ದಂಪತಿ ಭೇಟಿ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಉಜಿರೆಯ ಬಿರ್ಕು ರವರಿಗೆ ಮೊಬೈಲ್ ಹಸ್ತಾಂತರ

Suddi Udaya

ಉಜಿರೆ ನಿನ್ನಿಕಲ್ಲು 33/11 ಕೆ.ವಿ ವಿದ್ಯುತ್ ಉಪಕೇಂದ್ರದ ಕಾಮಗಾರಿ ಶೀಘ್ರ ಆರಂಭ: ನಿನ್ನಿಕಲ್ಲಿನಲ್ಲಿ 0.96 ಎಕ್ರೆ ಜಾಗ ಮಂಜೂರು: ರೂ. 46.66 ಲಕ್ಷ ಸ್ಥಳ ಮೌಲ್ಯ ಪಾವತಿಗೆ ಸೂಚನೆ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ಮನೋಹರ ಪ್ರಸಾದ್, ಜಿಲ್ಲಾ ಅಧ್ಯಕ್ಷರಾಗಿ ಇಸ್ಮಾಯಿಲ್ ಬಂಗಾಡಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!