September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

ಬೆಳ್ತಂಗಡಿ: ನಂಬರ್ ಪ್ಲೇಟ್ ಇಲ್ಲದ ಬೈಕೊಂದು ಹೊತ್ತಿ ಉರಿದ ಘಟನೆ ಬೆಳ್ತಂಗಡಿ ತಾಲೂಕಿನ ಚರ್ಚ್ ರೋಡ್ ಬಳಿ ಡಿ 31 ರಂದು ಮಧ್ಯಾಹ್ನ ನಡೆದಿದೆ.

ಬೆಳ್ತಂಗಡಿ ಚರ್ಚ್ ರೋಡ್ ನ ಸೈಂಟ್ ತೆರೇಸಾ ಹೈಸ್ಕೂಲು ಎದುರು ರಸ್ತೆಯಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೈಕೊಂದು ಹೊತ್ತಿ ಉರಿಯುತಿದ್ದು ಇದನ್ನು ಗಮನಿಸಿದ ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಿದ್ದಾರೆ.

ಅದರೆ ಬೈಕ್ ನ ವಾರೀಸುದಾರರು ಯಾರೂ ಅಲ್ಲಿ ಇರಲಿಲ್ಲ ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ಸ್ಥಳೀಯರು ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.ಸ್ಥಳದಲ್ಲಿ ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ ಮೂಡಿದ್ದು ಎಲ್ಲಿಂದಲೋ ನಂಬರ್ ಪ್ಲೇಟ್ ತೆಗೆದು ಬೈಕ್ ಕದ್ದು ತರುವ ವೇಳೆ ಬೆಂಕಿ ಕಾಣಿಸಿಕೊಂಡಿದ್ದು ಈ ಸಮಯದಲ್ಲಿ ಬೈಕ್ ಅಲ್ಲೆ ಬಿಟ್ಟು ಪರಾರಿಯಾಗಿರಬಹುದು ಅಥವಾ ಏನಾದರೂ ಗಾಯಗಳಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬೈಕ್ ಬಿಟ್ಟು ತೆರಳಿರುವ ಬಗ್ಗೆಯೂ   ಅನುಮಾನಿಸಲಾಗಿದೆ.

ಒಂದು ವಾರಗಳ ಹಿಂದೆ ಬೈಕೊಂದು ಕಳ್ಳತನವಾಗಿದ್ದು ಅದೇ ಬೈಕ್ ಆಗಿರಬಹುದೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತಿದ್ದಾರೆ.

Related posts

ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಸಮಾರೋಪ

Suddi Udaya

ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ಅರುಣ್ ಸಾಲಿಯಾನ್ ನಿಧನ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಪೋಸ್ಟರ್ ತಯಾರಿಕಾ ಕಾರ್ಯಾಗಾರ

Suddi Udaya

ಕೊಕ್ಕಡ: ಜೇಸಿ ಆಡಳಿತ ಸಭೆ: ಚುನಾವಣೆ ಅರಿವು ಆಂದೋಲನ ಕಾರ್ಯಕ್ರಮ

Suddi Udaya

ಬಂದಾರು ಗ್ರಾ.ಪಂ. ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿ ಸ್ವೀಕಾರ

Suddi Udaya

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನದ ವತಿಯಿಂದ ಪುಸ್ತಕ ವಿತರಣಾ ಸಮಾರಂಭ ಮತ್ತು ಶಿವಪ್ರಸಾದ್ ಅಜಿಲರಿಗೆ ಪೌರ ಸನ್ಮಾನ ಪೂರ್ವಭಾವಿ ಸಭೆ

Suddi Udaya
error: Content is protected !!