25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

ಬೆಳ್ತಂಗಡಿ: ನಂಬರ್ ಪ್ಲೇಟ್ ಇಲ್ಲದ ಬೈಕೊಂದು ಹೊತ್ತಿ ಉರಿದ ಘಟನೆ ಬೆಳ್ತಂಗಡಿ ತಾಲೂಕಿನ ಚರ್ಚ್ ರೋಡ್ ಬಳಿ ಡಿ 31 ರಂದು ಮಧ್ಯಾಹ್ನ ನಡೆದಿದೆ.

ಬೆಳ್ತಂಗಡಿ ಚರ್ಚ್ ರೋಡ್ ನ ಸೈಂಟ್ ತೆರೇಸಾ ಹೈಸ್ಕೂಲು ಎದುರು ರಸ್ತೆಯಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೈಕೊಂದು ಹೊತ್ತಿ ಉರಿಯುತಿದ್ದು ಇದನ್ನು ಗಮನಿಸಿದ ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಿದ್ದಾರೆ.

ಅದರೆ ಬೈಕ್ ನ ವಾರೀಸುದಾರರು ಯಾರೂ ಅಲ್ಲಿ ಇರಲಿಲ್ಲ ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ಸ್ಥಳೀಯರು ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.ಸ್ಥಳದಲ್ಲಿ ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ ಮೂಡಿದ್ದು ಎಲ್ಲಿಂದಲೋ ನಂಬರ್ ಪ್ಲೇಟ್ ತೆಗೆದು ಬೈಕ್ ಕದ್ದು ತರುವ ವೇಳೆ ಬೆಂಕಿ ಕಾಣಿಸಿಕೊಂಡಿದ್ದು ಈ ಸಮಯದಲ್ಲಿ ಬೈಕ್ ಅಲ್ಲೆ ಬಿಟ್ಟು ಪರಾರಿಯಾಗಿರಬಹುದು ಅಥವಾ ಏನಾದರೂ ಗಾಯಗಳಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬೈಕ್ ಬಿಟ್ಟು ತೆರಳಿರುವ ಬಗ್ಗೆಯೂ   ಅನುಮಾನಿಸಲಾಗಿದೆ.

ಒಂದು ವಾರಗಳ ಹಿಂದೆ ಬೈಕೊಂದು ಕಳ್ಳತನವಾಗಿದ್ದು ಅದೇ ಬೈಕ್ ಆಗಿರಬಹುದೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತಿದ್ದಾರೆ.

Related posts

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಸೆ.3 ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭ, ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

Suddi Udaya

ನಿಡಿಗಲ್-ಪಜಿರಡ್ಕ ಕಾಂಕ್ರೀಟ್ ರಸ್ತೆಯಲ್ಲಿ ಕುಸಿತ ಭೀತಿ

Suddi Udaya

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya

ದ್ವಿತೀಯ ಪಿಯು ಫಲಿತಾಂಶ: ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.94.28 ಫಲಿತಾಂಶ

Suddi Udaya
error: Content is protected !!