23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ನಿವೃತ್ತಿಗೊಂಡ ಪ್ರಥಮ ದರ್ಜೆ ಸಹಾಯಕ ನಾರಾಯಣ್ ನಾಯ್ಕ್ ಪಿ. ರವರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ 35 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ನಾರಾಯಣ್ ನಾಯ್ಕ್ ರವರಿಗೆ ಡಿ.30 ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಬೀಳ್ಕೊಡಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಅಧ್ಯಕ್ಷ ಶಿವಶಂಕರ್ ಸಮಾರಂಭ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಟಿ. ಜಿ. ಟಿ. ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ, ಪ್ರಾ. ಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಕಿಶೋರ್, ಎನ್ ಪಿ ಎಸ್ ಸಂಘದ ಅಧ್ಯಕ್ಷ ಸುರೇಶ್ ಮಾಚಾರು, ತಾಲೂಕು ಪ್ರೌ.ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟೇಶ್ ತುಳಪುಳೆ, ಕಾರ್ಡಿನೇಟರ್ ಮೋಹನ್ ಕುಮಾರ್, ಕಾರ್ಯದರ್ಶಿ ಪ್ರಕಾಶ್, ಪ್ರೌ. ಶಾಲಾ ಸಹಶಿಕ್ಷಕರ ಅಧ್ಯಕ್ಷ ರಾಧಾಕೃಷ್ಣ ಉಪಸ್ಥಿತರಿದ್ದರು.

ಪ್ರ. ದ. ಸ. ಪಡಂಗಡಿ ಶ್ರೀಮತಿ ಶಾರದಾ ಭಟ್ ಪ್ರಾರ್ಥಿಸಿ, ಶ್ರೀಮತಿ ಸುಧಾ ಸುರೇಶ್ ಸ್ವಾಗತಿಸಿದರು. ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸ. ಪ್ರೌ. ಶಾಲೆ ಪ್ರಕಾಶ್ ಬಿ. ಆರ್ ಧನ್ಯವಾದವಿತ್ತರು.

Related posts

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಬೆಳ್ತಂಗಡಿ : ಸಂತ ತೆರೇಸಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ: ಧ್ವಜಾರೋಹಣ, ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಧರ್ಮಸ್ಥಳ ಸಹಕಾರ ಸಂಘದಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಿ.4 : ಶ್ರೀ ಕ್ಷೇತ್ರದಲ್ಲಿ ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ,ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya
error: Content is protected !!