July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

ಬೆಳ್ತಂಗಡಿ: ನಂಬರ್ ಪ್ಲೇಟ್ ಇಲ್ಲದ ಬೈಕೊಂದು ಹೊತ್ತಿ ಉರಿದ ಘಟನೆ ಬೆಳ್ತಂಗಡಿ ತಾಲೂಕಿನ ಚರ್ಚ್ ರೋಡ್ ಬಳಿ ಡಿ 31 ರಂದು ಮಧ್ಯಾಹ್ನ ನಡೆದಿದೆ.

ಬೆಳ್ತಂಗಡಿ ಚರ್ಚ್ ರೋಡ್ ನ ಸೈಂಟ್ ತೆರೇಸಾ ಹೈಸ್ಕೂಲು ಎದುರು ರಸ್ತೆಯಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೈಕೊಂದು ಹೊತ್ತಿ ಉರಿಯುತಿದ್ದು ಇದನ್ನು ಗಮನಿಸಿದ ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಿದ್ದಾರೆ.

ಅದರೆ ಬೈಕ್ ನ ವಾರೀಸುದಾರರು ಯಾರೂ ಅಲ್ಲಿ ಇರಲಿಲ್ಲ ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ಸ್ಥಳೀಯರು ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.ಸ್ಥಳದಲ್ಲಿ ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ ಮೂಡಿದ್ದು ಎಲ್ಲಿಂದಲೋ ನಂಬರ್ ಪ್ಲೇಟ್ ತೆಗೆದು ಬೈಕ್ ಕದ್ದು ತರುವ ವೇಳೆ ಬೆಂಕಿ ಕಾಣಿಸಿಕೊಂಡಿದ್ದು ಈ ಸಮಯದಲ್ಲಿ ಬೈಕ್ ಅಲ್ಲೆ ಬಿಟ್ಟು ಪರಾರಿಯಾಗಿರಬಹುದು ಅಥವಾ ಏನಾದರೂ ಗಾಯಗಳಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬೈಕ್ ಬಿಟ್ಟು ತೆರಳಿರುವ ಬಗ್ಗೆಯೂ   ಅನುಮಾನಿಸಲಾಗಿದೆ.

ಒಂದು ವಾರಗಳ ಹಿಂದೆ ಬೈಕೊಂದು ಕಳ್ಳತನವಾಗಿದ್ದು ಅದೇ ಬೈಕ್ ಆಗಿರಬಹುದೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತಿದ್ದಾರೆ.

Related posts

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ಉಜಿರೆ: ಪಾದಚಾರಿಗಳ ಮೇಲೆ ಹರಿದ ಲಾರಿ: ಇಬ್ಬರು ಸಾವು

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಕಡಿರುದ್ಯಾವರ: ಕಾನರ್ಪ ಪುರುಷರ ಬಳಗದ ವತಿಯಿಂದ ಪುರುಷರ ರಾಶಿ ಪೂಜೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!