September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

ಬೆಳ್ತಂಗಡಿ: ನಂಬರ್ ಪ್ಲೇಟ್ ಇಲ್ಲದ ಬೈಕೊಂದು ಹೊತ್ತಿ ಉರಿದ ಘಟನೆ ಬೆಳ್ತಂಗಡಿ ತಾಲೂಕಿನ ಚರ್ಚ್ ರೋಡ್ ಬಳಿ ಡಿ 31 ರಂದು ಮಧ್ಯಾಹ್ನ ನಡೆದಿದೆ.

ಬೆಳ್ತಂಗಡಿ ಚರ್ಚ್ ರೋಡ್ ನ ಸೈಂಟ್ ತೆರೇಸಾ ಹೈಸ್ಕೂಲು ಎದುರು ರಸ್ತೆಯಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೈಕೊಂದು ಹೊತ್ತಿ ಉರಿಯುತಿದ್ದು ಇದನ್ನು ಗಮನಿಸಿದ ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಿದ್ದಾರೆ.

ಅದರೆ ಬೈಕ್ ನ ವಾರೀಸುದಾರರು ಯಾರೂ ಅಲ್ಲಿ ಇರಲಿಲ್ಲ ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ಸ್ಥಳೀಯರು ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.ಸ್ಥಳದಲ್ಲಿ ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ ಮೂಡಿದ್ದು ಎಲ್ಲಿಂದಲೋ ನಂಬರ್ ಪ್ಲೇಟ್ ತೆಗೆದು ಬೈಕ್ ಕದ್ದು ತರುವ ವೇಳೆ ಬೆಂಕಿ ಕಾಣಿಸಿಕೊಂಡಿದ್ದು ಈ ಸಮಯದಲ್ಲಿ ಬೈಕ್ ಅಲ್ಲೆ ಬಿಟ್ಟು ಪರಾರಿಯಾಗಿರಬಹುದು ಅಥವಾ ಏನಾದರೂ ಗಾಯಗಳಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬೈಕ್ ಬಿಟ್ಟು ತೆರಳಿರುವ ಬಗ್ಗೆಯೂ   ಅನುಮಾನಿಸಲಾಗಿದೆ.

ಒಂದು ವಾರಗಳ ಹಿಂದೆ ಬೈಕೊಂದು ಕಳ್ಳತನವಾಗಿದ್ದು ಅದೇ ಬೈಕ್ ಆಗಿರಬಹುದೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತಿದ್ದಾರೆ.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ನೇಮಕ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ 25ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ಹಸ್ತಾಂತರ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya
error: Content is protected !!