23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

ಬೆಳ್ತಂಗಡಿ: ನಂಬರ್ ಪ್ಲೇಟ್ ಇಲ್ಲದ ಬೈಕೊಂದು ಹೊತ್ತಿ ಉರಿದ ಘಟನೆ ಬೆಳ್ತಂಗಡಿ ತಾಲೂಕಿನ ಚರ್ಚ್ ರೋಡ್ ಬಳಿ ಡಿ 31 ರಂದು ಮಧ್ಯಾಹ್ನ ನಡೆದಿದೆ.

ಬೆಳ್ತಂಗಡಿ ಚರ್ಚ್ ರೋಡ್ ನ ಸೈಂಟ್ ತೆರೇಸಾ ಹೈಸ್ಕೂಲು ಎದುರು ರಸ್ತೆಯಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೈಕೊಂದು ಹೊತ್ತಿ ಉರಿಯುತಿದ್ದು ಇದನ್ನು ಗಮನಿಸಿದ ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಿದ್ದಾರೆ.

ಅದರೆ ಬೈಕ್ ನ ವಾರೀಸುದಾರರು ಯಾರೂ ಅಲ್ಲಿ ಇರಲಿಲ್ಲ ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ಸ್ಥಳೀಯರು ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.ಸ್ಥಳದಲ್ಲಿ ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ ಮೂಡಿದ್ದು ಎಲ್ಲಿಂದಲೋ ನಂಬರ್ ಪ್ಲೇಟ್ ತೆಗೆದು ಬೈಕ್ ಕದ್ದು ತರುವ ವೇಳೆ ಬೆಂಕಿ ಕಾಣಿಸಿಕೊಂಡಿದ್ದು ಈ ಸಮಯದಲ್ಲಿ ಬೈಕ್ ಅಲ್ಲೆ ಬಿಟ್ಟು ಪರಾರಿಯಾಗಿರಬಹುದು ಅಥವಾ ಏನಾದರೂ ಗಾಯಗಳಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬೈಕ್ ಬಿಟ್ಟು ತೆರಳಿರುವ ಬಗ್ಗೆಯೂ   ಅನುಮಾನಿಸಲಾಗಿದೆ.

ಒಂದು ವಾರಗಳ ಹಿಂದೆ ಬೈಕೊಂದು ಕಳ್ಳತನವಾಗಿದ್ದು ಅದೇ ಬೈಕ್ ಆಗಿರಬಹುದೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತಿದ್ದಾರೆ.

Related posts

ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ಉದ್ಘಾಟನೆ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬಡಗಕಾರಂದೂರು ಕಾರ್ಯಕ್ಷೇತ್ರದ ಸಿ.ಎಸ್.ಸಿ. ಕೇಂದ್ರ ಸ್ಥಳಾಂತರ

Suddi Udaya

ಕರ್ನಾಟಕ ಸರಕಾರವು ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ 4500 ಕೋಟಿ ರೂ. ಅನುದಾನ ಬಿಡುಗಡೆ ಮತ್ತು ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡುವ ಕುರಿತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಉಪ ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ವೇಣೂರು ಶ್ರೀ ಗಣೇಶೋತ್ಸವ ಬೆಳ್ಳಿ ಹಬ್ಬ: ಎಕ್ಸೆಲ್ ಕಾಲೇಜು ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಂದ ಲಾಂಛನ ಅನಾವರಣ

Suddi Udaya

ಭಾರಿ ಗಾಳಿ ಮಳೆ: ಉಜಿರೆ ಪೆರ್ಲ ನಿವಾಸಿ ಹೇಮಾವತಿರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ: ಗ್ರಾ.ಪಂ. ನಿಂದ ನೆರವು

Suddi Udaya
error: Content is protected !!