July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

ಬೆಳ್ತಂಗಡಿ: ನಂಬರ್ ಪ್ಲೇಟ್ ಇಲ್ಲದ ಬೈಕೊಂದು ಹೊತ್ತಿ ಉರಿದ ಘಟನೆ ಬೆಳ್ತಂಗಡಿ ತಾಲೂಕಿನ ಚರ್ಚ್ ರೋಡ್ ಬಳಿ ಡಿ 31 ರಂದು ಮಧ್ಯಾಹ್ನ ನಡೆದಿದೆ.

ಬೆಳ್ತಂಗಡಿ ಚರ್ಚ್ ರೋಡ್ ನ ಸೈಂಟ್ ತೆರೇಸಾ ಹೈಸ್ಕೂಲು ಎದುರು ರಸ್ತೆಯಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೈಕೊಂದು ಹೊತ್ತಿ ಉರಿಯುತಿದ್ದು ಇದನ್ನು ಗಮನಿಸಿದ ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಿದ್ದಾರೆ.

ಅದರೆ ಬೈಕ್ ನ ವಾರೀಸುದಾರರು ಯಾರೂ ಅಲ್ಲಿ ಇರಲಿಲ್ಲ ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ಸ್ಥಳೀಯರು ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.ಸ್ಥಳದಲ್ಲಿ ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ ಮೂಡಿದ್ದು ಎಲ್ಲಿಂದಲೋ ನಂಬರ್ ಪ್ಲೇಟ್ ತೆಗೆದು ಬೈಕ್ ಕದ್ದು ತರುವ ವೇಳೆ ಬೆಂಕಿ ಕಾಣಿಸಿಕೊಂಡಿದ್ದು ಈ ಸಮಯದಲ್ಲಿ ಬೈಕ್ ಅಲ್ಲೆ ಬಿಟ್ಟು ಪರಾರಿಯಾಗಿರಬಹುದು ಅಥವಾ ಏನಾದರೂ ಗಾಯಗಳಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬೈಕ್ ಬಿಟ್ಟು ತೆರಳಿರುವ ಬಗ್ಗೆಯೂ   ಅನುಮಾನಿಸಲಾಗಿದೆ.

ಒಂದು ವಾರಗಳ ಹಿಂದೆ ಬೈಕೊಂದು ಕಳ್ಳತನವಾಗಿದ್ದು ಅದೇ ಬೈಕ್ ಆಗಿರಬಹುದೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತಿದ್ದಾರೆ.

Related posts

ಜೂ.21: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಉಜಿರೆ ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಸಮಾರೋಪ

Suddi Udaya

ನಾಳೆಯಿಂದ(ಜು.20) ಕಡಮಗುಂಡಿ, ಬೊಲ್ಲೆ ಜಲಪಾತ ಪ್ರವೇಶಕ್ಕೆ ನಿರ್ಬಂಧ

Suddi Udaya

ಎಸ್‌ಡಿಎಂ. ಶಿಕ್ಷಣ ಮಹಾವಿದ್ಯಾಲಯ(ಬಿ.ಎಡ್)ದಲ್ಲಿ ನಕ್ಕು ಬಿಡು ಬಾನಕ್ಕಿ ಗಜಲ್ ಸಂಕಲನ ಬಿಡುಗಡೆ ಮತ್ತು ಗಜಲ್ ರಚನಾ ಕಾರ್ಯಾಗಾರ

Suddi Udaya
error: Content is protected !!