May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಮಿತ್ರ ಯುವಕ ಮಂಡಲ ಅರಳಿ ಹಾಗೂ ಮಿತ್ರ ಮಹಿಳಾ ಮಂಡಳಿ ವತಿಯಿಂದ 27ನೇ ವರ್ಷದ ಪ್ರತಿಭಾ ಸಂಗಮ


ಉಜಿರೆ: ಅರಳಿ ಮಿತ್ರ ಯುವಕ ಮಂಡಲ ಮತ್ತು ಮಿತ್ರ ಮಹಿಳಾ ಮಂಡಳಿ ಅರಳಿ ಇದರ ಜಂಟಿ ಆಶ್ರಯದಲ್ಲಿ 27ನೇ ವರ್ಷದ ಪ್ರತಿಭಾ ಸಂಗಮವು ಡಿ.30 ರಂದು ಮಿತ್ರ ಯುವಕ ಮಂಡಲದ ರಂಗ ಮಂದಿರ ವೇದಿಕೆಯಲ್ಲಿ ನಡೆಯಿತು.
‌‌‌

ಮೊದಲಿಗೆ ಹೊಸದಾಗಿ ರಚನೆಗೊಂಡ ಶ್ರೀ ಬ್ರಹ್ಮಾದೇವರ ಭಜನಾ ತಂಡ ಅರಳಿ ಇವರ ಕುಣಿತ ಭಜನೆಯ ಮೂಲಕ ಆರಂಭವಾಗಿ, ಸಭಾ ಅಧ್ಯಕ್ಷತೆಯನ್ನು ಯುವರಾಜ್ ಅರಳಿ ಅಧ್ಯಕ್ಷತೆಯಲ್ಲಿ ಕೆ ಧನಂಜಯ್ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಶ್ರೀಮತಿ ಉಷಾಕಿರಣ್ ಕಾರಂತ್, ಬಾಲಕೃಷ್ಣ ಕೊರಮೇರು, ಸದಾಶಿವ ಹೆಗಡೆ, ಸನ್ಮಾನಿತರಾಗಿ ಜಯಾನಂದ ಘಟಕಾಧಿಕಾರಿ ಮುಖ್ಯಮಂತ್ರಿ ಚಿನ್ನದ ಪದಕ ವಿಜೇತರು, ಚೇತನ್ ಅರಳಿ, ಶ್ರೀಮತಿ ಸರಳಾಕ್ಷಿ ಪುರುಷೋತ್ತಮ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು .

ನಂತರ ಬಹುಮಾನ ವಿತರಣೆ ನಡೆಸಿ ರಾಜೇಶ್ ಶೈಕ್ಷಣಿಕ ವರದಿ ಮಂಡಿಸಿದರು.

ವತ್ಸಾಲ ಗೌಡ ಪ್ರೀತಿಯಿಂದ ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ನಿಶಿತ್ ಬಂಗೇರ ನೆರವೇರಿಸಿ ಸಂತೋಷ್ ಸಾಲಿಯನ್ ಧನ್ಯವಾದವಿತ್ತರು.
ಊರಿನ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಗೆಂದಗಿಡಿ ಎಂಬ ವಿಶೇಷ ನಾಟಕ ಮೂಲಕ ಕಾರ್ಯಕ್ರಮ ನಡೆಯಿತು.

Related posts

ನಡ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಮುಗಳಿ ಬ್ರಹ್ಮ ಕ್ಷೇತ್ರ ದೇವರ ಸನ್ನಿಧಿ ಬಸದಿ ಒಳಗೆ ನುಗ್ಗಿದ್ದ ನೀರು

Suddi Udaya

ಉಜಿರೆ: ಗಾಂಧಿನಗರದಲ್ಲಿ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ವಿರೋಧಿಸಿ ಅರಸಿನಮಕ್ಕಿ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರಾಜೆಕ್ಟರ್ ಹಸ್ತಾಂತರ

Suddi Udaya
error: Content is protected !!