24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಮಿತ್ರ ಯುವಕ ಮಂಡಲ ಅರಳಿ ಹಾಗೂ ಮಿತ್ರ ಮಹಿಳಾ ಮಂಡಳಿ ವತಿಯಿಂದ 27ನೇ ವರ್ಷದ ಪ್ರತಿಭಾ ಸಂಗಮ


ಉಜಿರೆ: ಅರಳಿ ಮಿತ್ರ ಯುವಕ ಮಂಡಲ ಮತ್ತು ಮಿತ್ರ ಮಹಿಳಾ ಮಂಡಳಿ ಅರಳಿ ಇದರ ಜಂಟಿ ಆಶ್ರಯದಲ್ಲಿ 27ನೇ ವರ್ಷದ ಪ್ರತಿಭಾ ಸಂಗಮವು ಡಿ.30 ರಂದು ಮಿತ್ರ ಯುವಕ ಮಂಡಲದ ರಂಗ ಮಂದಿರ ವೇದಿಕೆಯಲ್ಲಿ ನಡೆಯಿತು.
‌‌‌

ಮೊದಲಿಗೆ ಹೊಸದಾಗಿ ರಚನೆಗೊಂಡ ಶ್ರೀ ಬ್ರಹ್ಮಾದೇವರ ಭಜನಾ ತಂಡ ಅರಳಿ ಇವರ ಕುಣಿತ ಭಜನೆಯ ಮೂಲಕ ಆರಂಭವಾಗಿ, ಸಭಾ ಅಧ್ಯಕ್ಷತೆಯನ್ನು ಯುವರಾಜ್ ಅರಳಿ ಅಧ್ಯಕ್ಷತೆಯಲ್ಲಿ ಕೆ ಧನಂಜಯ್ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಶ್ರೀಮತಿ ಉಷಾಕಿರಣ್ ಕಾರಂತ್, ಬಾಲಕೃಷ್ಣ ಕೊರಮೇರು, ಸದಾಶಿವ ಹೆಗಡೆ, ಸನ್ಮಾನಿತರಾಗಿ ಜಯಾನಂದ ಘಟಕಾಧಿಕಾರಿ ಮುಖ್ಯಮಂತ್ರಿ ಚಿನ್ನದ ಪದಕ ವಿಜೇತರು, ಚೇತನ್ ಅರಳಿ, ಶ್ರೀಮತಿ ಸರಳಾಕ್ಷಿ ಪುರುಷೋತ್ತಮ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು .

ನಂತರ ಬಹುಮಾನ ವಿತರಣೆ ನಡೆಸಿ ರಾಜೇಶ್ ಶೈಕ್ಷಣಿಕ ವರದಿ ಮಂಡಿಸಿದರು.

ವತ್ಸಾಲ ಗೌಡ ಪ್ರೀತಿಯಿಂದ ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ನಿಶಿತ್ ಬಂಗೇರ ನೆರವೇರಿಸಿ ಸಂತೋಷ್ ಸಾಲಿಯನ್ ಧನ್ಯವಾದವಿತ್ತರು.
ಊರಿನ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಗೆಂದಗಿಡಿ ಎಂಬ ವಿಶೇಷ ನಾಟಕ ಮೂಲಕ ಕಾರ್ಯಕ್ರಮ ನಡೆಯಿತು.

Related posts

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ: ಸಾಧಕರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಅಳದಂಗಡಿ: ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರ ನಿವಾಸಕ್ಕೆ ಭೇಟಿ ನೀಡಿದ ಲಾವಣ್ಯ ಬಳ್ಳಾಲ್

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಿಂದ ಮುಂಡ್ರುಪ್ಪಾಡಿ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಉಜಿರೆ: ರೇಡಿಯೋ‌ ನಿನಾದ 90.4 ಎಫ್ ಎಂ; ಸಮುದಾಯ ಬಾನುಲಿಯಲ್ಲಿ‌ ಬ್ಯಾರಿ‌ ಕಾರ್ಯಕ್ರಮ ಪ್ರಸಾರದ ಬಗ್ಗೆ ಸಮಾಲೋಚನೆ

Suddi Udaya
error: Content is protected !!