28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಪಾಡಿ ಕಾರ್ಯಕ್ಷೇತ್ರದ ಓಂ ಶ್ರೀ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಲ್ಪಾಡಿ ಕಾರ್ಯಕ್ಷೇತ್ರದ ಓಂ ಶ್ರೀ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಕೊಲ್ಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಬೆಳಾಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ವಿದ್ಯಾರವರು ಮಹಿಳೆಯು ತನ್ನನ್ನು ತಾನು ಮರೆತು ತನ್ನ ಕುಟುಂಬದ ಅತ್ತೆ ಮಾವನ ಗಂಡ ಮಕ್ಕಳ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುತ್ತಾಳೆ. ಒಂದು ಮಹಿಳೆ ಅಭಿವೃದ್ಧಿಯಾದರೆ ಕುಟುಂಬ ಅಭಿವೃದ್ಧಿ ಆಗಲು ಸಾಧ್ಯ. ಎಂಬ ನಿಟ್ಟಿನಲ್ಲಿ ಮಹಿಳೆಯರಿಗಾಗಿ ಮಾತೃಶ್ರೀ ಹೇಮಾವತಿ ಅಮ್ಮನವರು ಹಮ್ಮಿಕೊಂಡ ಈ ಜ್ಞಾನ ವಿಕಾಸ ಕಾರ್ಯಕ್ರಮದಿಂದ ಅದೆಷ್ಟು ಮಹಿಳೆಯರಿಗೆ ವಿವಿಧ ಮಾಹಿತಿಯನ್ನು ನೀಡುವುದರೊಂದಿಗೆ ತನ್ನ ಪ್ರತಿಭೆಗಳನ್ನು ಹೊರಹಾಕಲು ಆವಕಾಶ ಕಲ್ಪಿಸಿರುತ್ತಾರೆ ಎಂದು ತಿಳಿಸಿದರು.

ತಾಲೂಕಿನ ಗೌರವಾನ್ವಿತ ಯೋಜನಧಿಕಾರಿ ಸುರೇಂದ್ರರವರು ಜ್ಞಾನವಿಕಾಸ ಕೇಂದ್ರದ ದ್ಯೇಯೋದ್ದೇಶಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಒಕ್ಕೂಟ ಮಾಜಿ ಅಧ್ಯಕ್ಷ ಎಲ್ಯಣ್ಣ ನಾಯಕ್ ನೂತನ ಅಧ್ಯಕ್ಷರಾದ ನೀಲಾವತಿ, ವಲಯ ಮೇಲ್ವಿಚಾರಕಿ ವನಿತಾ , ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಮಧುರ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನ ವಿಕಾಸ ಕೇಂದ್ರದ ಸದಸ್ಯೆ ಶ್ರೀಮತಿ ಲೀಲಾವತಿಯವರು ವಹಿಸಿದ್ದರು. ಸೇವಾ ಪ್ರತಿನಿಧಿ ಪ್ರಮೀಳಾರವರು ನಿರೂಪಿಸಿ, ಸಾವಿತ್ರಿ ಸ್ವಾಗತಿಸಿ, ಲೀಲಾವತಿ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು.

Related posts

ಇಳಂತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಬೇಸಿಗೆ ಶಿಬಿರ ಯಶಸ್ವಿ ಸಂಪನ್ನ

Suddi Udaya

ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya

ಮಾಲಾಡಿ : ಸಂಪತ್ ರಾಜ್ ಭಟ್ ನಿಧನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಪತ್ತೆಯಾದ ಬಂದೂಕು ಪ್ರಕರಣ ಮಧ್ಯಂತರ ತಡೆ ಮುಂದೂಡಿದ ಹೈಕೋರ್ಟ್

Suddi Udaya
error: Content is protected !!