
ಬೆಳ್ತಂಗಡಿ : ಹೊಸ ವರ್ಷದ ಆಚರಣೆಯಲ್ಲಿ ಸ್ನೇಹಿತನ ಜೊತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿ ನಂತರ ಒಬ್ಬನ ಮೂಗು ಕಚ್ಚಿ ತುಂಡರಿಸಿದ ಘಟನೆ ಬೆಳ್ತಂಗಡಿಯ ಪಿಲ್ಯದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ಉಲ್ಪೆ ಎಂಬಲ್ಲಿನ ನಿವಾಸಿ ದೀಕ್ಷಿತ್ (28ವ) ಯುವಕ ಮೂಗುಗೆ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿ. 31 ರಂದು ರಾತ್ರಿ ಹೊಸ ವರ್ಷದ ಸಂದರ್ಭದಲ್ಲಿಯ ಪಾಟಿ೯ಯಲ್ಲಿ ಕ್ಷುಲ್ಲಕ ವಿಚಾರದಲ್ಲಿ ಸ್ನೇಹಿತನ ಜೊತೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿದಾಗ ಮೂಡುಗೆರೆ ನಿವಾಸಿ , ಪ್ರಸ್ತುತ ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸವಿರುವ ರಾಕೇಶ್ ಎಂಬಾತ ದೀಕ್ಷಿತ್ ಎಂಬಾತನ ಮೂಗಿಗೆ ಕಚ್ಚಿದ್ದಾನೆ ಎಂದು ಆರೋಪಿಸಲಾಗಿದೆ.
ಘಟನೆಯಿಂದ ಗಂಭೀರ ಗಾಯಗೊಂಡ ದೀಕ್ಷಿತ್ ನನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಕರಣ ಸಂಬಂಧ ವೇಣೂರು ಪೋಲಿಸರು ಆಸ್ಪತ್ರೆಗೆ ತೆರಳಿ ವಿಚಾರಣೆ ನಡೆಸುತ್ತಿದ್ದಾರೆ.













