25.3 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಯುವಕರಿಬ್ಬರ ನಡುವೆ ಗಲಾಟೆ: ಮೂಗಿಗೆ ಕಚ್ಚಿ ಗಾಯಗೊಳಿಸಿದ ಸ್ನೇಹಿತ

ಬೆಳ್ತಂಗಡಿ : ಹೊಸ ವರ್ಷದ ಆಚರಣೆಯಲ್ಲಿ ಸ್ನೇಹಿತನ ಜೊತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿ ನಂತರ ಒಬ್ಬನ ಮೂಗು ಕಚ್ಚಿ ತುಂಡರಿಸಿದ ಘಟನೆ ಬೆಳ್ತಂಗಡಿಯ ಪಿಲ್ಯದಲ್ಲಿ ನಡೆದಿದೆ‌.

ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ಉಲ್ಪೆ ಎಂಬಲ್ಲಿನ ನಿವಾಸಿ ದೀಕ್ಷಿತ್ (28ವ) ಯುವಕ ಮೂಗುಗೆ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿ. 31 ರಂದು ರಾತ್ರಿ ಹೊಸ ವರ್ಷದ ಸಂದರ್ಭದಲ್ಲಿಯ ಪಾಟಿ೯ಯಲ್ಲಿ ಕ್ಷುಲ್ಲಕ ವಿಚಾರದಲ್ಲಿ ಸ್ನೇಹಿತನ ಜೊತೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿದಾಗ ಮೂಡುಗೆರೆ ನಿವಾಸಿ , ಪ್ರಸ್ತುತ ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸವಿರುವ ರಾಕೇಶ್ ಎಂಬಾತ ದೀಕ್ಷಿತ್ ಎಂಬಾತನ ಮೂಗಿಗೆ ಕಚ್ಚಿದ್ದಾನೆ ಎಂದು ಆರೋಪಿಸಲಾಗಿದೆ.


ಘಟನೆಯಿಂದ ಗಂಭೀರ ಗಾಯಗೊಂಡ ದೀಕ್ಷಿತ್ ನನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಕರಣ ಸಂಬಂಧ ವೇಣೂರು ಪೋಲಿಸರು ಆಸ್ಪತ್ರೆಗೆ ತೆರಳಿ ವಿಚಾರಣೆ ನಡೆಸುತ್ತಿದ್ದಾರೆ.

Related posts

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

Suddi Udaya

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಕ್ಯಾಂಪ್ಕೊ “ಸಾಂತ್ವನ” ಧನಸಹಾಯ ಹಸ್ತಾಂತರ

Suddi Udaya

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿ ಪ್ರದೇಶದಲ್ಲಿ ಮತ್ತೆ ಪ್ರತ್ಯಕ್ಷಗೊಂಡ ಚಿರತೆಗಳು

Suddi Udaya

ಮಾ16: ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವ , ವಂದೇ ಮಾತರಂ, ನನ್ನ ಸೇವೆ ದೇಶಕ್ಕಾಗಿ ಧ್ಯೇಯದೊಂದಿಗೆ ನೇತ್ರಾವತಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!