28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯ ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಮ್ಯಾನೇಜ್ಮೆಂಟ್ ಫೆಸ್ಟ್ ” IGNITE – 2K23 ಆಯೋಜಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಪ್ರಾಂಶುಪಾಲರಾದ ಡಾ. ಆ್ಯಂಟನಿ ಟಿ.ಪಿ ರವರು ನೆರವೇರಿಸಿ ವಿದ್ಯಾರ್ಥಿ ಜೀವನವೇ ಕಲಿಕೆಯ ಪ್ರಮುಖ ಘಟ್ಟ ಇಲ್ಲಿಯ ಕಲಿಕೆ ಮುಂದಿನ ಬದುಕಿಗೆ ದಾರಿಯಾಗುವುದು. ತಮ್ಮಲ್ಲಿರುವ ಆಸಕ್ತಿ, ಪೆಸ್ಟ್ ನ ಆಯೋಜನೆ ಇವೆಲ್ಲವು ಇದರ ರೂಪಗಳು. ಎಲ್ಲವನ್ನೂ ಕಲಿತು ಯಶಸ್ಸು ನಿಮ್ಮದಾಗಿಸಿಕೊಳ್ಳಿ ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲ ಪ್ರೊ. ರಾಘವ. ಯನ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ವಿವಿಧ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗಹಿಸಿದ್ದರು.

ಸಮಾರೋಪ ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲ ಪ್ರೊ. ಗಣಪತಿ ಭಟ್ ಕುಳಮರ್ವ ಮುಖ್ಯ ಅತಿಥಿಯಾಗಿ ಭಾಗವಹಿಸಿ ಪ್ರಶಸ್ತಿ ಪ್ರಧಾನ ಮಾಡಿದರು.

ಅಧ್ಯಕ್ಷತೆಯನ್ನು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಯಾದ ಡಾ. ಸುಬ್ರಹ್ಮಣ್ಯ ಕೆ ಇವರು ವಹಿಸಿದ್ದರು.

ಫೆಸ್ಟ್ ನ ಸಮಗ್ರ ಪ್ರಶಸ್ತಿಯನ್ನು ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಮತ್ತು ರನ್ನರ್ ಅಪ್ ಪ್ರಶಸ್ತಿಯನ್ನು ಸರ್ಕಾರಿ ಪದವಿ ಪೂರ್ವ ಕಾಲೇಜು, ನಡ ಪಡೆದುಕೊಂಡಿತು.

ಕಾರ್ಯಕ್ರಮದಲ್ಲಿ ಭೋದಕ ಮತ್ತು ಭೋದಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಭಾರತೀಯ ಮಜ್ದೂರ್ ಸಂಘ ಕರ್ನಾಟಕ ರಾಜ್ಯ ಅಭ್ಯಾಸ ವರ್ಗಕ್ಕೆ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ, ಅಭಿನಂದನೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಿದ್ದ ಮರ

Suddi Udaya

ತ್ವರಿತವಾಗಲಿ ಬೆಳೆ ವಿಮೆ ಕಂತು ಪಾವತಿ: ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಶಾಲಾ ವಾರ್ಷಿಕೋತ್ಸವ ಮತ್ತು ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಪೆರಿಂಜೆ ಪಡ್ಯಾರಬೆಟ್ಟ ಕ್ಷೇತ್ರದಿಂದ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ: ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದ ಮರ

Suddi Udaya
error: Content is protected !!