ಶಿರ್ಲಾಲು: ಜ. 29 ರಿಂದ ಫೆ.2 ರ ವರೆಗೆ ನಡೆಯಲಿರುವ ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಸೂರ್ಯನಾರಾಯಣ ರಾವ್, ಆಡಳಿತ ಸಮಿತಿಯ ಸದಸ್ಯರಾದ ಪ್ರಭಾಕರ ಮುಡ್ಜಲು, ಲೋಕನಾಥೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಜಗನ್ನಾಥ ಟೈಲರ್, ಭಜನಾ ಮಂಡಳಿಯ ಮಾಜಿ ಅಧ್ಯಕ್ಷ ಅಶೋಕ್ ಕುಮಾರ್, ರಾಜೇಶ್ ಕುಲಾಲ್ ಬೈರೊಟ್ಟು ಆಕಾಶ್, ಮತ್ತು ಸದಸ್ಯರು ಉಪಸ್ಥಿತರಿದ್ದರು.













