ಬೆಳ್ತಂಗಡಿ: ಅಯೋಧ್ಯೆ ಶ್ರೀರಾಮ ಮಂದಿರದ ಮೂಲ ವಿಗ್ರಹ ಬಾಲರಾಮನ ಮೂರ್ತಿ ಕೆತ್ತನೆ ಕಾರ್ಯ ನಿರ್ವಹಿಸಿರುವ ತಾಲೂಕಿನ ನ್ಯಾಯ ತರ್ಪು ಗ್ರಾಮ ನಾಳದ ಶಿಲ್ಪಿ ಜಯಚಂದ್ರ ಆಚಾರ್ಯ ಇವರನ್ನು ಗುರು ಸೇವಾ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಡಿ.31 ರಂದು ಅವರ ಸ್ವಗೃಹದಲ್ಲಿ ಗೌರವಿಸಿ, ಅಭಿನಂದಿಸಲಾಯಿತು.
ಪರಿಷತ್ ಅಧ್ಯಕ್ಷ ಪ್ರಕಾಶ್ ಪುರೋಹಿತ್ ಅವರು, ಶಿಲ್ಪಿ ಜಯಚಂದ್ರ ಅವರಿಗೆ ಶ್ರೀರಾಮನ ಸೇವೆ ಮಾಡಲು ಅವಕಾಶ ಸಿಕ್ಕಿರುವುದು ಅಪೂರ್ವ ಯೋಗವಾಗಿದ್ದು ನಮ್ಮ ಸಮಾಜಕ್ಕೆ ಹೆಮ್ಮೆಯ ವಿಚಾರ ಎಂದರು.
ಈ ಸಂದರ್ಭದಲ್ಲಿ ಪರಿಷತ್ ಸಂಘಟನಾ ಕಾರ್ಯದರ್ಶಿ ಮಂಜುನಾಥ ಆಚಾರ್ಯ ಅಳದಂಗಡಿ, ಕಾರ್ಯದರ್ಶಿ ರಾಮ್ ಪ್ರಸಾದ್ ಗುಂಪಲಜಿ, ಕೋಶಾಧಿಕಾರಿ ಹರಿಶ್ಚಂದ್ರ ಆಚಾರ್ಯ ಗುರುವಾಯನಕೆರೆ, ದೀಪಕ್ ಆಚಾರ್ಯ ಗುರುವಾಯನಕೆರೆ, ಯಜ್ಞೇಶ್ ಆಚಾರ್ಯ ಕುದ್ಯಾಡಿ ಉಪಸ್ಥಿತರಿದ್ದರು.













