24.6 C
ಪುತ್ತೂರು, ಬೆಳ್ತಂಗಡಿ
June 21, 2026
Uncategorized

ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತನೆ ಕಾರ್ಯ ನಿರ್ವಹಿಸಿರುವ ನಾಳದ ಶಿಲ್ಪಿ ಜಯಚಂದ್ರ ಆಚಾರ್ಯರವರಿಗೆ ಬೆಳ್ತಂಗಡಿ ಗುರು ಸೇವಾ ಪರಿಷತ್ ಘಟಕದಿಂದ ಗೌರವಾರ್ಪಣೆ

ಬೆಳ್ತಂಗಡಿ: ಅಯೋಧ್ಯೆ ಶ್ರೀರಾಮ ಮಂದಿರದ ಮೂಲ ವಿಗ್ರಹ ಬಾಲರಾಮನ ಮೂರ್ತಿ ಕೆತ್ತನೆ ಕಾರ್ಯ ನಿರ್ವಹಿಸಿರುವ ತಾಲೂಕಿನ ನ್ಯಾಯ ತರ್ಪು ಗ್ರಾಮ ನಾಳದ ಶಿಲ್ಪಿ ಜಯಚಂದ್ರ ಆಚಾರ್ಯ ಇವರನ್ನು ಗುರು ಸೇವಾ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಡಿ.31 ರಂದು ಅವರ ಸ್ವಗೃಹದಲ್ಲಿ ಗೌರವಿಸಿ, ಅಭಿನಂದಿಸಲಾಯಿತು.


ಪರಿಷತ್ ಅಧ್ಯಕ್ಷ ಪ್ರಕಾಶ್ ಪುರೋಹಿತ್ ಅವರು, ಶಿಲ್ಪಿ ಜಯಚಂದ್ರ ಅವರಿಗೆ ಶ್ರೀರಾಮನ ಸೇವೆ ಮಾಡಲು ಅವಕಾಶ ಸಿಕ್ಕಿರುವುದು ಅಪೂರ್ವ ಯೋಗವಾಗಿದ್ದು ನಮ್ಮ ಸಮಾಜಕ್ಕೆ ಹೆಮ್ಮೆಯ ವಿಚಾರ ಎಂದರು.
ಈ ಸಂದರ್ಭದಲ್ಲಿ ಪರಿಷತ್ ಸಂಘಟನಾ ಕಾರ್ಯದರ್ಶಿ ಮಂಜುನಾಥ ಆಚಾರ್ಯ ಅಳದಂಗಡಿ, ಕಾರ್ಯದರ್ಶಿ ರಾಮ್ ಪ್ರಸಾದ್ ಗುಂಪಲಜಿ, ಕೋಶಾಧಿಕಾರಿ ಹರಿಶ್ಚಂದ್ರ ಆಚಾರ್ಯ ಗುರುವಾಯನಕೆರೆ, ದೀಪಕ್ ಆಚಾರ್ಯ ಗುರುವಾಯನಕೆರೆ, ಯಜ್ಞೇಶ್ ಆಚಾರ್ಯ ಕುದ್ಯಾಡಿ ಉಪಸ್ಥಿತರಿದ್ದರು.

Related posts

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಶಿವಗಿರಿಯಾತ್ರೆಯಲ್ಲಿ ಗೆಜ್ಜೆಗಿರಿಯ ಪ್ರಮುಖರು

Suddi Udaya

ಸಂತ ಅಂತೋನಿ ಪದವಿ ಕಾಲೇಜು ಹಾಗೂ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಲಾ ಸಂಭ್ರಮ

Suddi Udaya

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

Suddi Udaya
error: Content is protected !!