ಮರೋಡಿ ಗ್ರಾಮ ಪಂಚಾಯತ್ ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಿರ್ತಾಡಿ ಸಹಯೋಗ
ಮರೋಡಿ:ಗ್ರಾಮ ಪಂಚಾಯತ್ ಮರೋಡಿ ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಿರ್ತಾಡಿ ಇವರ ಸಹಯೋಗದಲ್ಲಿ ಮರೋಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತ್ನಾಕರ್ ಬುಣ್ಣಾನ್ ವಹಿಸಿದ್ದರು.
ವೇದಿಕೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಬೆಳ್ಳಿಬೀಡು ಪಾರ್ಶ್ವನಾಥ ಸ್ವಾಮಿ ಬಸದಿಯ ಹೇಮರಾಜ್ ಕೆ, ಶಿರ್ತಾಡಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಶಾಖಾ ವ್ಯವಸ್ಥಾಪಕರಾದ ಜೈದೇವ್ ಮಿಶ್ರಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಾಂತಪ್ಪ, ಸಹಾಯಕ ಕೃಷಿ ಅಧಿಕಾರಿ ಅಭಿಲಾಷ್, ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಪ್ರಭಾರಿ ಅಭಿಜಿತ್ ಜೈನ್ , ಗ್ರಾಮ ಪಂಚಾಯತ್ ಸದಸ್ಯರಾದ ಪದ್ಮಶ್ರೀ ಜೈನ್, ಯಶೋಧರ ಆಚಾರ್ಯ, ಅಶೋಕ ಪೂಜಾರಿ, ಉಮೇಶ್ ಸಾಲಿಯಾನ್, ಧನಲಕ್ಷ್ಮೀ, ಉಮಾವತಿ, ಸಮಿತಾ, ಸುನಂದಾ, ಯಶೋಧಾ ಉಪಸ್ಥಿತರಿದ್ದರು.

ಸನ್ಮಾನ: ಕಾರ್ಯಕ್ರಮದಲ್ಲಿ ಎರಡು ಜನ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಉಜ್ವಲ ಯೋಜನೆಯಡಿ ಅಡುಗೆ ಅನಿಲ ವಿತರಿಸಲಾಯಿತು. ಕೃಷಿ, ಶೈಕ್ಷಣಿಕ, ಕೇಂದ್ರ ಸರ್ಕಾರದ ಯೋಜನೆಯಡಿ ಪ್ರಯೋಜನ ಪಡೆದು ಯಶಸ್ವಿಯಾದ ಉದ್ಯಮಗಳನ್ನು ಗೌರವಿಸಿ ಅಭಿನಂದಿಸಲಾಯಿತು.













