25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಯಂಗ್ ಚಾಲೆಂಜರ್ಸ್ ನಲ್ಲಿ ಅಣಬೆ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ರಬ್ಬರ್ ಬೊರ್ಡ್ ಕೋಟ್ಟಾಯಂ, ಮತ್ತು ರಬ್ಬರ್ ಪ್ರೊಡ್ಯೂಸರ್ಸ್ ಸೊಸೈಟಿ ಮುಂಡಾಜೆ ಇವರ ಜಂಟಿ ಆಶ್ರಯದಲ್ಲಿ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಹಾಗೂ ವಿವಿಧ ಸ್ವಸಹಾಯ ಸಂಘಗಳ ಸದಸ್ಯರ ಕೂಡುವಿಕೆಯೊಂದಿಗೆ ಯಂಗ್ ಚಾಲೆಂಜರ್ಸ್ ಭವನದಲ್ಲಿ ಒಂದು ದಿನದ ಅಣಬೆ ಕೃಷಿ ಪ್ರಾತ್ಯಕ್ಷಿಕೆ ಹಾಗೂ ತರಬೇತಿ ಕಾರ್ಯಾಗಾರ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ರಬ್ಬರ್ ಪ್ರೊಡ್ಯೂಸರ್ಸ್ ಸೊಸೈಟಿ ಮುಂಡಾಜೆ ಇದರ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಹೊಸಗದ್ದೆ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಸಿಪಿಸಿಆರ್‌ಐ ಸಂಸ್ಥೆಯ ಪಾಂಡುರಂಗ ಮಂಗಳೂರು, ರಬ್ಬರ್ ಬೋರ್ಡ್ ನ ರಿಜಿನಲ್ ಕಚೇರಿಯಾ ರಬ್ಬರ್ ಪ್ರೊಟೆಕ್ಷನ್ ಕಮಿಷನರ್ ಶೃಜಾ ಟಿ.ಪಿ, ಅಸಿಸ್ಟೆಂಟ್ ಡೆವಲಪ್ಮೆಂಟ್ ಅಫೀಸರ್ ರೋಶನಿ
ಇವರು ಭಾಗಿಯಾಗಿದ್ದು ತರಬೇತಿ ನಡೆಸಿಕೊಟ್ಟರು.

ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಸಂಚಾಲಕ ನಾಮದೇವ ರಾವ್ ಸ್ವಾಗತಿಸಿದರು. ಗೌರವ ಸಲಹೆಗಾರ ಬಾಬು ಪೂಜಾರಿ ಕೂಳೂರು ವಂದಿಸಿದರು. ಕಾರ್ಯದರ್ಶಿ ಲಕ್ಷ್ಮಣ್ ನಾಯ್ಕ್ ನಿರೂಪಿಸಿದರು.
ಯಂಗ್ ಚಾಲೆಂಜರ್ಸ್ ಪದಾಧಿಕಾರಿಗಳು ಹಾಗೂ 40 ಕ್ಕೂ ಅಧಿಕ ಮಂದಿ ತರಬೇತಿಯ ಪ್ರಯೋಜನ ಪಡೆದರು.

Related posts

ಡಿ.17: ಕರಾಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕುವೆಟ್ಟು ಗ್ರಾ.ಪಂ.ನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್ ಉದ್ಘಾಟನೆ

Suddi Udaya

ದ.ಕ. ಜಿಲ್ಲೆಯ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟಣೆಯ ಪ್ರಧಾನ ಕಾರ್ಯದರ್ಶಿಯಾಗಿ ಬಿ ಅಬ್ದುಲ್ ರಝಾಕ್ ನೇಮಕ

Suddi Udaya

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

Suddi Udaya

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

Suddi Udaya
error: Content is protected !!