25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ


ನಡ: ವಿಧಾನ ಪರಿಷತ್ ಸದಸ್ಯರ ನಿಧಿ ರೂ.1.17 ಕೋಟಿ ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇದರ ನೂತನ ಕಟ್ಟಡದ ಉದ್ಘಾಟನೆ ಜ.6 ರಂದು ನಡೆಯಲಿದೆ” ಎಂದು ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್ ಹೇಳಿದರು.


ಅವರು ಜ.1ರಂದು ಶಾಲೆಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಈ ವಿಷಯವನ್ನು ಪ್ರಕಟಿಸಿದರು. ಕರ್ನಾಟಕ ಸರಕಾರದ ಸಭಾಧ್ಯಕ್ಷ ಯು. ಟಿ. ಖಾದರ್ ಸಮಾರಂಭದ ಉದ್ಘಾಟನೆಯನ್ನು, ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ನೂತನ ಕಟ್ಟಡವನ್ನು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯ ಸಭಾ ಸದಸ್ಯರು ಡಾ.ಡಿ.ವೀರೇಂದ್ರ ಹೆಗ್ಗಡೆ, ವಿಧಾನ ಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ್ ಪೂಜಾರಿ, ಕೆ. ಹರೀಶ್ ಕುಮಾರ್,ಬಿ.ಎಂ.ಫಾರೂಕ್, ಎಸ್.ಎಲ್. ಭೋಜೆ ಗೌಡ, ಪ್ರತಾಪಸಿಂಹ ನಾಯಕ್, ಮಂಜುನಾಥ್ ಭಂಡಾರಿ,ನಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ,ಸರಕಾರಿ ಶಿಕ್ಷಣ ಮಹಾ ವಿದ್ಯಾಲಯದ ಪ್ರಿನ್ಸಿಪಾಲ್ ಡಾ.ಸಿಪ್ರಿಯನ್ ಮೊಂತೆರೋ, ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕ, ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಪ್ರಿನ್ಸಿಪಾಲ್ ರಾಜಲಕ್ಷೀ ಕೆ., ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ಸಮನ್ವಯಾಧಿಕಾರಿ ಮೋಹನ್ ಕುಮಾರ್, ಧನಂಜಯ ಅಜ್ರಿ ನಡ ಗುತ್ತು, ಪಂಚಾಯತಿ ಸದಸ್ಯರು ಇನ್ನಿತರ ಗಣ್ಯರು ಭಾಗವಸಲಿದ್ದಾರೆ ಎಂದು ತಿಳಿಸಿದರು.


ನಡ ಗ್ರಾಮದ ಜನರ ಕೂಡುವಿಕೆಯಿಂದ ನಡ ಗುತ್ತು ದೇವಪ್ಪ ಅಜ್ರಿಯವರ ಮುಂದಾಳತ್ವದಲ್ಲಿ ೧೯೨೫ ನ.೯ರಂದು ಬಸದಿಯ ಛತ್ರದಲ್ಲಿ ಶಾಲೆ ಪ್ರಾರಂಭವಾಯಿತು. ಆಗ ಗ್ರಾಮದಲ್ಲಿ ಒಂದೇ ಶಾಲೆ ಇದ್ದುದರಿಂದ ೬೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದರು. ಪ್ರಸ್ತುತ ಗ್ರಾಮದಲ್ಲಿ 6 ಶಾಲೆಗಳು ಇದ್ದರೂ 92 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಈ ಶಾಲೆಯಲ್ಲಿ ಹಳೆಯ ಕಟ್ಟಡ ಇದ್ದುದರಿಂದ ಸರಕಾರ ಅನುದಾನದಲ್ಲಿ ರೂ.1.17 ಕೋಟಿ ವೆಚ್ಚದ 7 ಕೊಠಡಿ, ಶೌಚಾಲಯ,ಸ್ಮಾರ್ಟ್ ಕ್ಲಾಸ್ ಗಳನ್ನು ಒಳಗೊಂಡ ಎಲ್ಲಾ ನೂತನ ಕಟ್ಟಡ ನಿರ್ಮಾಣವಾಗಿದೆ” ಎಂದರು.


ಪತ್ರಿಕಾಗೋಷ್ಠಿಯಲ್ಲಿ ಜಿ.ಪಂ.ಮಾಜಿ ಸದಸ್ಯ ರಾಜಶೇಖರ್ ಅಜ್ರಿ, ನಡ ಗ್ರಾ.ಪಂ ಅಧ್ಯಕ್ಷೆ ಮಂಜುಳಾ, ಎಸ್ ಡಿ ಎಂ ಸಿ ಅಧ್ಯಕ್ಷ ವಸಂತ ಗೌಡ, ಮುಖ್ಯ ಶಿಕ್ಷಕಿ ಪುಷ್ಪಾ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿಜಯ ಗೌಡ, ನ್ಯಾಯವಾದಿ ಶಶಿಕಿರಣ್ ಜೈನ್, ಗ್ರಾ.ಪಂ ಮಾಜಿ ಅಧ್ಯಕ್ಷ ಮುನಿರಾಜ ಅಜ್ರಿ, ಸಯ್ಯದ್ ಅಬೀಬ್ ಸಾಹೇಬ್, ಪ್ರವೀಣ್ ವಿ.ಜೆ. ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು: ವಳಗುಡ್ಡೆ ನಿವಾಸಿ ಕೃಷ್ಣ ಗೌಡ ನಿಧನ

Suddi Udaya

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ. ಧ. ಗ್ರಾ. ಯೋಜನೆಯಲ್ಲಿ ಆಯುಧ ಪೂಜೆ

Suddi Udaya

ಪಣಕಜೆ ಕೃಷ್ಣನಗರ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ ರವಿರಾಜ್ ಹೆಗ್ಡೆ ನಿಧನ

Suddi Udaya
error: Content is protected !!