May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೊಸ ವರ್ಷದ ಪ್ರಯುಕ್ತ ವಿಶೇಷ ಫಲಪುಷ್ಪಗಳಿಂದ ಅಲಂಕೃತಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ

ಧರ್ಮಸ್ಥಳ: ಹೊಸ ವರ್ಷದ ಪ್ರಯುಕ್ತ ಶ್ರಿ ಕ್ಷೇತ್ರ ಧರ್ಮಸ್ಥಳವು ದೇವಸ್ಥಾನ ವಿಷೇಶ ಹೂವುಗಳಿಂದ ಕಂಗೋಳಿಸುತ್ತಿದೆ.

ಬೆಂಗಳೂರಿನ ಟಿವಿಎಸ್ ಉದ್ಯಮಿ ಗೋಪಾಲ್ ರಾವ್ ಹಾಗೂ ಇತರ ಉದ್ಯಮಿಗಳಾದ ಆನಂದ, ಮಂಜು, ಪುಟ್ಟಸ್ವಾಮಿ, ರಾಜು ಜತೆಗೂಡಿ ಬೆಂಗಳೂರಿನ ಶರವಣ್ ಅವರ ನೂರು ಮಂದಿ ಪುಷ್ಪಾಲಂಕಾರ ಮಾಡುವಲ್ಲಿ ಸಹಕರಿಸಿದರು.

ಕಳೆದ 15 ವರ್ಷಗಳಿಂದ ಅವರು ಈ ಸೇವೆಯನ್ನು ನೀಡುತ್ತಿದ್ದಾರೆ. ದೇಗುಲದ ಮುಖಮಂಟಪ, ಒಳಾಂಗಣ, ಹೊರಾಂಗಣ, ಗೋಪುರ, ಹೆಗ್ಗಡೆಯವರ ಬೀಡು ಸೇರಿದಂತೆ ಸುಮಾರು 15 ಲಕ್ಷಕ್ಕೂ ಅಧಿಕ ವೆಚ್ಚದ ಹಣ್ಣು, ವಿದೇಶಿ, ಸಹಿತ ಸ್ವದೇಶಿ ಹೂಗಳು, ಕೊಯಮತ್ತೂರಿನ ಬಾಳೆದಿಂಡು, 8000 ತೆಂಗಿನಕಾಯಿ, 1 ಟನ್ ಬದನೆ, ಜೋಳ, ಸೇಬು, ಎಳನೀರು, ಡ್ರಾಗನ್ ಫೂಟ್, ಅಡಿಕೆ ಸಹಿತ ವಿವಿಧ ಹಣ್ಣುಗಳಿಂದ ಅಲಂಕರಿಸಲಾಗಿದೆ.

ದೇಗುಲದ ಮುಂಭಾಗ ಶಿವಪಾರ್ವತಿ, ಷಣ್ಮುಖ, ಗಣೇಶನ ಪ್ರತಿಕೃತಿಗಳಿಂದ ಸಾಂಪುದಾಯಿಕವಾಗಿ ಅಲಂಕಾರ ನಡೆಸಲಾಗಿದೆ.ಒಳಾಂಗಣದಲ್ಲಿ ಹೂಗಳ ತೋರಣ ಭಕ್ತರನ್ನು ಮಂತ್ರಮುಗ್ಧಗೊಳಿಸಿದೆ.

Related posts

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಜುಲೈ 12: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌,: ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ

Suddi Udaya

ಲೋಕೇಶ್ವರಿ ವಿನಯಚಂದ್ರರವರಿಗೆ ಸ್ವಗ್ರಾಮದಲ್ಲಿ ಗೌರವಾರ್ಪಣೆ

Suddi Udaya
error: Content is protected !!