
ಧರ್ಮಸ್ಥಳ: ಹೊಸ ವರ್ಷದ ಪ್ರಯುಕ್ತ ಶ್ರಿ ಕ್ಷೇತ್ರ ಧರ್ಮಸ್ಥಳವು ದೇವಸ್ಥಾನ ವಿಷೇಶ ಹೂವುಗಳಿಂದ ಕಂಗೋಳಿಸುತ್ತಿದೆ.

ಬೆಂಗಳೂರಿನ ಟಿವಿಎಸ್ ಉದ್ಯಮಿ ಗೋಪಾಲ್ ರಾವ್ ಹಾಗೂ ಇತರ ಉದ್ಯಮಿಗಳಾದ ಆನಂದ, ಮಂಜು, ಪುಟ್ಟಸ್ವಾಮಿ, ರಾಜು ಜತೆಗೂಡಿ ಬೆಂಗಳೂರಿನ ಶರವಣ್ ಅವರ ನೂರು ಮಂದಿ ಪುಷ್ಪಾಲಂಕಾರ ಮಾಡುವಲ್ಲಿ ಸಹಕರಿಸಿದರು.
ಕಳೆದ 15 ವರ್ಷಗಳಿಂದ ಅವರು ಈ ಸೇವೆಯನ್ನು ನೀಡುತ್ತಿದ್ದಾರೆ. ದೇಗುಲದ ಮುಖಮಂಟಪ, ಒಳಾಂಗಣ, ಹೊರಾಂಗಣ, ಗೋಪುರ, ಹೆಗ್ಗಡೆಯವರ ಬೀಡು ಸೇರಿದಂತೆ ಸುಮಾರು 15 ಲಕ್ಷಕ್ಕೂ ಅಧಿಕ ವೆಚ್ಚದ ಹಣ್ಣು, ವಿದೇಶಿ, ಸಹಿತ ಸ್ವದೇಶಿ ಹೂಗಳು, ಕೊಯಮತ್ತೂರಿನ ಬಾಳೆದಿಂಡು, 8000 ತೆಂಗಿನಕಾಯಿ, 1 ಟನ್ ಬದನೆ, ಜೋಳ, ಸೇಬು, ಎಳನೀರು, ಡ್ರಾಗನ್ ಫೂಟ್, ಅಡಿಕೆ ಸಹಿತ ವಿವಿಧ ಹಣ್ಣುಗಳಿಂದ ಅಲಂಕರಿಸಲಾಗಿದೆ.
ದೇಗುಲದ ಮುಂಭಾಗ ಶಿವಪಾರ್ವತಿ, ಷಣ್ಮುಖ, ಗಣೇಶನ ಪ್ರತಿಕೃತಿಗಳಿಂದ ಸಾಂಪುದಾಯಿಕವಾಗಿ ಅಲಂಕಾರ ನಡೆಸಲಾಗಿದೆ.ಒಳಾಂಗಣದಲ್ಲಿ ಹೂಗಳ ತೋರಣ ಭಕ್ತರನ್ನು ಮಂತ್ರಮುಗ್ಧಗೊಳಿಸಿದೆ.













