25.3 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೊಸ ವರ್ಷದ ಪ್ರಯುಕ್ತ ವಿಶೇಷ ಫಲಪುಷ್ಪಗಳಿಂದ ಅಲಂಕೃತಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ

ಧರ್ಮಸ್ಥಳ: ಹೊಸ ವರ್ಷದ ಪ್ರಯುಕ್ತ ಶ್ರಿ ಕ್ಷೇತ್ರ ಧರ್ಮಸ್ಥಳವು ದೇವಸ್ಥಾನ ವಿಷೇಶ ಹೂವುಗಳಿಂದ ಕಂಗೋಳಿಸುತ್ತಿದೆ.

ಬೆಂಗಳೂರಿನ ಟಿವಿಎಸ್ ಉದ್ಯಮಿ ಗೋಪಾಲ್ ರಾವ್ ಹಾಗೂ ಇತರ ಉದ್ಯಮಿಗಳಾದ ಆನಂದ, ಮಂಜು, ಪುಟ್ಟಸ್ವಾಮಿ, ರಾಜು ಜತೆಗೂಡಿ ಬೆಂಗಳೂರಿನ ಶರವಣ್ ಅವರ ನೂರು ಮಂದಿ ಪುಷ್ಪಾಲಂಕಾರ ಮಾಡುವಲ್ಲಿ ಸಹಕರಿಸಿದರು.

ಕಳೆದ 15 ವರ್ಷಗಳಿಂದ ಅವರು ಈ ಸೇವೆಯನ್ನು ನೀಡುತ್ತಿದ್ದಾರೆ. ದೇಗುಲದ ಮುಖಮಂಟಪ, ಒಳಾಂಗಣ, ಹೊರಾಂಗಣ, ಗೋಪುರ, ಹೆಗ್ಗಡೆಯವರ ಬೀಡು ಸೇರಿದಂತೆ ಸುಮಾರು 15 ಲಕ್ಷಕ್ಕೂ ಅಧಿಕ ವೆಚ್ಚದ ಹಣ್ಣು, ವಿದೇಶಿ, ಸಹಿತ ಸ್ವದೇಶಿ ಹೂಗಳು, ಕೊಯಮತ್ತೂರಿನ ಬಾಳೆದಿಂಡು, 8000 ತೆಂಗಿನಕಾಯಿ, 1 ಟನ್ ಬದನೆ, ಜೋಳ, ಸೇಬು, ಎಳನೀರು, ಡ್ರಾಗನ್ ಫೂಟ್, ಅಡಿಕೆ ಸಹಿತ ವಿವಿಧ ಹಣ್ಣುಗಳಿಂದ ಅಲಂಕರಿಸಲಾಗಿದೆ.

ದೇಗುಲದ ಮುಂಭಾಗ ಶಿವಪಾರ್ವತಿ, ಷಣ್ಮುಖ, ಗಣೇಶನ ಪ್ರತಿಕೃತಿಗಳಿಂದ ಸಾಂಪುದಾಯಿಕವಾಗಿ ಅಲಂಕಾರ ನಡೆಸಲಾಗಿದೆ.ಒಳಾಂಗಣದಲ್ಲಿ ಹೂಗಳ ತೋರಣ ಭಕ್ತರನ್ನು ಮಂತ್ರಮುಗ್ಧಗೊಳಿಸಿದೆ.

Related posts

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಕಾಶಿಪಟ್ಣ ಸ.ಪ್ರೌ. ಶಾಲೆಯ ಶಿಕ್ಷಕಿ ಸೌಮ್ಯರವರಿಗೆ 4 ಬೆಳ್ಳಿ ಹಾಗೂ 1 ಕಂಚಿನ ಪದಕ

Suddi Udaya

ಜು.1: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya
error: Content is protected !!