ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ ಕಾರ್ಯಕ್ರಮದ ಆಮಂತ್ರಣ ಪತ್ರ ಜ.1 ರಂದು ಬಿಡುಗಡೆಮಾಡಲಾಯಿತು.
ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲ್ಲಿರುವ ಶ್ರೀ ರಾಮನ ಪ್ರತಿಷ್ಠಾ ದಿನದ ಪ್ರಯುಕ್ತ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ 1001 ಶ್ರೀ ರಾಮ ಜಪ ಯಜ್ಞ ಕಾರ್ಯಕ್ರಮ ಹಮ್ಮಿ ಕೊಂಡಿದ್ದು ಈ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಶಿಶಿಲದಿಂದ ಅಯೋಧ್ಯೆ ಕರಸೇವೆಯಲ್ಲಿ ಭಾಗವಹಿಸಿದ ಶೀನಪ್ಪ ಮುಚ್ಚಿರಡ್ಕ ಇವರು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಮೂಡೆತ್ತಾಯ, ಉಪಾಧ್ಯಕ್ಷ ಆನಂದ ಪೂಜಾರಿ, ಕಾರ್ಯದರ್ಶಿ ಕರುಣಾಕರ ಶಿಶಿಲ, ಶಿಶಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುಧಿನ್ ಡಿ., ಮಾಜಿ ಅಧ್ಯಕ್ಷ ಸಂದೀಪ್ ಅಮ್ಮುಡಂಗೆ, ಶಿಶಿಲ ಹಿಂದು ಜಾಗರಣ ವೇದಿಕೆ ಅಧ್ಯಕ್ಷ ದೀಪಕ್ ಶಾಲೆಗುಡ್ಡೆ, ಕೊರಗಪ್ಪ ಗೌಡ ಪಡ್ಪು, ರೂಪೇಶ್ ಬೈಪಾಡಿ, ಯತೀಶ್ ಪೇರಿಕೆ, ಯೋಗೀಶ್ ಅಂಬೆಲ್ತಡ್ಕ, ಸಂತೋಷ ಅಮ್ಮುಡಂಗೆ ಮೊದಲಾದವರು ಉಪಸ್ಥಿತರಿದ್ದರು.













