ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಿಳಾ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆಯು ಡಿ.30 ರಂದು ನಡೆಯಿತು.
ಗೌರವಾಧ್ಯಕ್ಷರಾಗಿ ಶ್ರೀಮತಿ ಸುಭಾಷಿಣಿ ಜನಾರ್ಧನ್ ಗೌಡ, ಅಧ್ಯಕ್ಷರಾಗಿ ಶ್ರೀಮತಿ ಗೀತಾ ರಾಮಣ್ಣ ಗೌಡ,
ಕಾರ್ಯದರ್ಶಿಯಾಗಿ ಶ್ರೀಮತಿ ಲೀಲಾ ಬೆಳಾಲು, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಮೀನಾಕ್ಷಿ ಮಹಾಬಲ ಗೌಡ,
ಉಪಾಧ್ಯಕ್ಷರಾಗಿ ಶ್ರೀಮತಿ ದಿವಿಜ ಗಣೇಶ್ ಗೌಡ ಮತ್ತು ಶ್ರೀಮತಿ ದಯಾಮಣಿ ರವೀಂದ್ರನಾಥ ಗೌಡ
ಕೋಶಾಧಿಕಾರಿಯಾಗಿ ಶ್ರೀಮತಿ ಶೋಭಾ ನಾರಾಯಣ ಗೌಡ ಆಯ್ಕೆಯಾದರು.
ಸಭೆಯಲ್ಲಿ ತಾಲೂಕು ಸಂಘದ ಕಾರ್ಯದರ್ಶಿ ಗಣೇಶ್ ಗೌಡ ಮತ್ತು ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ನೂತನ ಪದಾಧಿಕಾರಿಗಳಿಗೆ ಶುಭವನ್ನು ಹಾರೈಸಿದರು.













