ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ 21 ವರ್ಷ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಗುಲಾಬಿ ಅವರಿಗೆ ಕಾಲೇಜಿನ ವತಿಯಿಂದ ಡಿ. 30 ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಗುಲಾಬಿ ಅವರಿಗೆ ಫಲಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ, ಉಪ ಪ್ರಾಂಶುಪಾಲ ಪ್ರೊ. ಎಸ್.ಎನ್. ಕಾಕತ್ಕರ್, ಪರೀಕ್ಷಾಂಗ ಕುಲಸಚಿವೆ ನಂದಾ ಕುಮಾರಿ, ಕಲಾ ನಿಕಾಯದ ಡೀನ್ ಡಾ. ಶ್ರೀಧರ್ ಭಟ್, ವಾಣಿಜ್ಯ ನಿಕಾಯದ ಡೀನ್ ಶಕುಂತಲಾ, ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ವಿಶ್ವನಾಥ ಪಿ., ಲೆಕ್ಕಪತ್ರ ನಿರ್ವಹಣೆ ವಿಭಾಗದ ಮುಖ್ಯಸ್ಥ ದಿವಾಕರ ಪಟವರ್ಧನ್, ಆಡಳಿತ ವಿಭಾಗದ ಮುಖ್ಯಸ್ಥ ರಾಜಪ್ಪ ಕೆ.ಎಸ್. ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.













