25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ನಗದು ದೋಚಿದ ಕಳ್ಳರು: ಮಾಲಾಡಿ ಪುಷ್ಪರಾಜ ಹೆಗ್ಡೆಯವರ ಅಡಕೆ ವ್ಯಾಪಾರ ಅಂಗಡಿಯಿಂದ ರೂ. 2.31 ಲಕ್ಷ ಕಳವು

ಮಡಂತ್ಯಾರು: ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಅಪರಿಚಿತರು ಲಕ್ಷಾಂತರ ನಗದು ದೋಚಿದ ಘಟನೆ ಮಡಂತ್ಯಾರಿನಿಂದ ವರದಿಯಾಗಿದೆ.

ಮಾಲಾಡಿ ಗ್ರಾಮದ ಟಿ. ಪುಷ್ಪರಾಜ ಹೆಗ್ಡೆ ಎಂಬವರ ದೂರಿನಂತೆ, ಮಾಲಾಡಿ ಗ್ರಾಮದ ಮಡಂತ್ಯಾರು ನಾವುಂಡ ಕಡೆಗೆ ಹೋಗುವ ರಸ್ತೆಯಲ್ಲಿ ಅಡಕೆ ವ್ಯಾಪಾರ ಅಂಗಡಿಯನ್ನು ನಡೆಸುತ್ತಿದ್ದು,ಜ.1 ರಂದು ಬೆಳಿಗ್ಗೆ ಅಂಗಡಿಯಲ್ಲಿ ಕೆಲಸ ಮಾಡುವ ಇಸ್ಮಾಯಿಲ್‌ ಎಂಬವರಲ್ಲಿ ಕ್ಯಾಷ್‌ ಡ್ರಾವರ್‌ ನ ಕೀ ಯನ್ನು ನೀಡಿ, ಅನ್ಯ ಕೆಲಸದ ನಿಮಿತ್ತ ಹೊರಗೆ ಹೋಗಿರುತ್ತಾರೆ. ಮಧ್ಯಾಹ್ನ ಸಮಯ ಅಂಗಡಿಯಲ್ಲಿದ್ದ ಇಸ್ಮಾಯಿಲ್‌ ಕರೆ ಮಾಡಿ,ಇಬ್ಬರು ಅಪರಿಚಿತರು ಸ್ಕೂಟರಿನಲ್ಲಿ ಅಂಗಡಿಗೆ ಬಂದಿದ್ದು,ತನ್ನ ಗಮನ ಬೇರೆಡೆಗೆ ಸೆಳೆದು ಕ್ಯಾಷ್ ಡ್ರಾಯರ್ ನಲ್ಲಿದ್ದ ಹಣವನ್ನು ಕಳ್ಳತನ ಮಾಡಿರುತ್ತಾರೆ ಎಂಬುದಾಗಿ ತಿಳಿಸಿರುತ್ತಾರೆ.

ಮಾಲೀರು ಅಂಗಡಿಗೆ ಬಂದು ಕ್ಯಾಶ್‌ ಡ್ರಾವರ್‌ ನ್ನು ಪರಿಶೀಲಿಸಿದಾಗ ಡ್ರಾವರ್‌ ನಲ್ಲಿದ್ದ ಒಟ್ಟು 2,31,000 ರೂ.ಹಣ ಕಳವಾಗಿರುವುದು ಕಂಡುಬಂದಿರುತ್ತದೆ.ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Related posts

ಉಜಿರೆ ಗ್ರಾಮ ಪಂಚಾಯತ್ ನ ಎಲ್ಲಾ ವಾರ್ಡ್ ಗಳಲ್ಲಿ ಸ್ವಚ್ಛ ಶನಿವಾರದ ಅಂಗವಾಗಿ ಸ್ವಚ್ಛತಾ ಶ್ರಮದಾನ ಹಾಗೂ ಮಾಹಿತಿ ಕಾರ್ಯಾಗಾರ:

Suddi Udaya

ಉಜಿರೆ: ಧರ್ಮಜಾಗೃತಿ ಸಮಿತಿಯ ಪ್ರಧಾನ ಸಂಚಾಲಕರಾಗಿ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆಯಲ್ಲಿ ಎಸ್.ಡಿ.ಪಿ.ಐ ಆಗ್ರಹ

Suddi Udaya

ರಾಷ್ಟ್ರಮಟ್ಟದ ನೃತ್ಯೋತ್ಸವ: ಧರಿತ್ರಿ ಭಿಡೆ ದ್ವಿತೀಯ

Suddi Udaya
error: Content is protected !!