30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ನಗದು ದೋಚಿದ ಕಳ್ಳರು: ಮಾಲಾಡಿ ಪುಷ್ಪರಾಜ ಹೆಗ್ಡೆಯವರ ಅಡಕೆ ವ್ಯಾಪಾರ ಅಂಗಡಿಯಿಂದ ರೂ. 2.31 ಲಕ್ಷ ಕಳವು

ಮಡಂತ್ಯಾರು: ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಅಪರಿಚಿತರು ಲಕ್ಷಾಂತರ ನಗದು ದೋಚಿದ ಘಟನೆ ಮಡಂತ್ಯಾರಿನಿಂದ ವರದಿಯಾಗಿದೆ.

ಮಾಲಾಡಿ ಗ್ರಾಮದ ಟಿ. ಪುಷ್ಪರಾಜ ಹೆಗ್ಡೆ ಎಂಬವರ ದೂರಿನಂತೆ, ಮಾಲಾಡಿ ಗ್ರಾಮದ ಮಡಂತ್ಯಾರು ನಾವುಂಡ ಕಡೆಗೆ ಹೋಗುವ ರಸ್ತೆಯಲ್ಲಿ ಅಡಕೆ ವ್ಯಾಪಾರ ಅಂಗಡಿಯನ್ನು ನಡೆಸುತ್ತಿದ್ದು,ಜ.1 ರಂದು ಬೆಳಿಗ್ಗೆ ಅಂಗಡಿಯಲ್ಲಿ ಕೆಲಸ ಮಾಡುವ ಇಸ್ಮಾಯಿಲ್‌ ಎಂಬವರಲ್ಲಿ ಕ್ಯಾಷ್‌ ಡ್ರಾವರ್‌ ನ ಕೀ ಯನ್ನು ನೀಡಿ, ಅನ್ಯ ಕೆಲಸದ ನಿಮಿತ್ತ ಹೊರಗೆ ಹೋಗಿರುತ್ತಾರೆ. ಮಧ್ಯಾಹ್ನ ಸಮಯ ಅಂಗಡಿಯಲ್ಲಿದ್ದ ಇಸ್ಮಾಯಿಲ್‌ ಕರೆ ಮಾಡಿ,ಇಬ್ಬರು ಅಪರಿಚಿತರು ಸ್ಕೂಟರಿನಲ್ಲಿ ಅಂಗಡಿಗೆ ಬಂದಿದ್ದು,ತನ್ನ ಗಮನ ಬೇರೆಡೆಗೆ ಸೆಳೆದು ಕ್ಯಾಷ್ ಡ್ರಾಯರ್ ನಲ್ಲಿದ್ದ ಹಣವನ್ನು ಕಳ್ಳತನ ಮಾಡಿರುತ್ತಾರೆ ಎಂಬುದಾಗಿ ತಿಳಿಸಿರುತ್ತಾರೆ.

ಮಾಲೀರು ಅಂಗಡಿಗೆ ಬಂದು ಕ್ಯಾಶ್‌ ಡ್ರಾವರ್‌ ನ್ನು ಪರಿಶೀಲಿಸಿದಾಗ ಡ್ರಾವರ್‌ ನಲ್ಲಿದ್ದ ಒಟ್ಟು 2,31,000 ರೂ.ಹಣ ಕಳವಾಗಿರುವುದು ಕಂಡುಬಂದಿರುತ್ತದೆ.ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Related posts

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

Suddi Udaya

ಉಸ್ಮಾನ್ ಗರ್ಡಾಡಿರವರು ಪ್ರಮುಖ ಅಗ್ನಿಶಾಮಕ ಹುದ್ದೆಗೆ ಪದೋನ್ನತಿಗೊಂಡು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ನಿಯುಕ್ತಿ

Suddi Udaya

ಭತ್ತದ ತಳಿ ಸಂರಕ್ಷಕ ದೇವರಾವ್ ಅವರಿಗೆ ಪ್ರಶಸ್ತಿ ಪ್ರದಾನ

Suddi Udaya

ಶಿಬಾಜೆ: ತುಂಬತ್ತಾಜೆ ನಿವಾಸಿ ಲೀಲಮ್ಮ ನಿಧನ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್; ಶೇ 50ರಷ್ಟು ರಿಯಾಯಿತಿ: ಖರೀದಿಗೆ ಮುಗಿಬಿದ್ದ ಜನರು

Suddi Udaya
error: Content is protected !!