23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ನಗದು ದೋಚಿದ ಕಳ್ಳರು: ಮಾಲಾಡಿ ಪುಷ್ಪರಾಜ ಹೆಗ್ಡೆಯವರ ಅಡಕೆ ವ್ಯಾಪಾರ ಅಂಗಡಿಯಿಂದ ರೂ. 2.31 ಲಕ್ಷ ಕಳವು

ಮಡಂತ್ಯಾರು: ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಅಪರಿಚಿತರು ಲಕ್ಷಾಂತರ ನಗದು ದೋಚಿದ ಘಟನೆ ಮಡಂತ್ಯಾರಿನಿಂದ ವರದಿಯಾಗಿದೆ.

ಮಾಲಾಡಿ ಗ್ರಾಮದ ಟಿ. ಪುಷ್ಪರಾಜ ಹೆಗ್ಡೆ ಎಂಬವರ ದೂರಿನಂತೆ, ಮಾಲಾಡಿ ಗ್ರಾಮದ ಮಡಂತ್ಯಾರು ನಾವುಂಡ ಕಡೆಗೆ ಹೋಗುವ ರಸ್ತೆಯಲ್ಲಿ ಅಡಕೆ ವ್ಯಾಪಾರ ಅಂಗಡಿಯನ್ನು ನಡೆಸುತ್ತಿದ್ದು,ಜ.1 ರಂದು ಬೆಳಿಗ್ಗೆ ಅಂಗಡಿಯಲ್ಲಿ ಕೆಲಸ ಮಾಡುವ ಇಸ್ಮಾಯಿಲ್‌ ಎಂಬವರಲ್ಲಿ ಕ್ಯಾಷ್‌ ಡ್ರಾವರ್‌ ನ ಕೀ ಯನ್ನು ನೀಡಿ, ಅನ್ಯ ಕೆಲಸದ ನಿಮಿತ್ತ ಹೊರಗೆ ಹೋಗಿರುತ್ತಾರೆ. ಮಧ್ಯಾಹ್ನ ಸಮಯ ಅಂಗಡಿಯಲ್ಲಿದ್ದ ಇಸ್ಮಾಯಿಲ್‌ ಕರೆ ಮಾಡಿ,ಇಬ್ಬರು ಅಪರಿಚಿತರು ಸ್ಕೂಟರಿನಲ್ಲಿ ಅಂಗಡಿಗೆ ಬಂದಿದ್ದು,ತನ್ನ ಗಮನ ಬೇರೆಡೆಗೆ ಸೆಳೆದು ಕ್ಯಾಷ್ ಡ್ರಾಯರ್ ನಲ್ಲಿದ್ದ ಹಣವನ್ನು ಕಳ್ಳತನ ಮಾಡಿರುತ್ತಾರೆ ಎಂಬುದಾಗಿ ತಿಳಿಸಿರುತ್ತಾರೆ.

ಮಾಲೀರು ಅಂಗಡಿಗೆ ಬಂದು ಕ್ಯಾಶ್‌ ಡ್ರಾವರ್‌ ನ್ನು ಪರಿಶೀಲಿಸಿದಾಗ ಡ್ರಾವರ್‌ ನಲ್ಲಿದ್ದ ಒಟ್ಟು 2,31,000 ರೂ.ಹಣ ಕಳವಾಗಿರುವುದು ಕಂಡುಬಂದಿರುತ್ತದೆ.ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Related posts

ಸವಣಾಲು ನೇತಾಜಿ ಸುಭಾಷ್ ಚಂದ್ರ ಬೋಸ್ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಅಪೇಕ್ಷಾ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದು ವಿದ್ಯಾರ್ಥಿವೇತನಕ್ಕೆ ಆಯ್ಕೆ

Suddi Udaya

ನಾರಾವಿ ಕಾಲೇಜಿನಲ್ಲಿ ಅಂತರ್ ತರಗತಿ ಕ್ವಿಜ್ ಸ್ಪರ್ಧೆ

Suddi Udaya

ಬಿಲ್ಲವ ಜಾತಿ ಮಾತ್ರ, ಉಪಜಾತಿ ಇಲ್ಲ, ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ‘ಬಿಲ್ಲವ ‘ ಎಂದೇ ನಮೂದಿಸಿ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿಕೆ

Suddi Udaya

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!