July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ನಗದು ದೋಚಿದ ಕಳ್ಳರು: ಮಾಲಾಡಿ ಪುಷ್ಪರಾಜ ಹೆಗ್ಡೆಯವರ ಅಡಕೆ ವ್ಯಾಪಾರ ಅಂಗಡಿಯಿಂದ ರೂ. 2.31 ಲಕ್ಷ ಕಳವು

ಮಡಂತ್ಯಾರು: ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಅಪರಿಚಿತರು ಲಕ್ಷಾಂತರ ನಗದು ದೋಚಿದ ಘಟನೆ ಮಡಂತ್ಯಾರಿನಿಂದ ವರದಿಯಾಗಿದೆ.

ಮಾಲಾಡಿ ಗ್ರಾಮದ ಟಿ. ಪುಷ್ಪರಾಜ ಹೆಗ್ಡೆ ಎಂಬವರ ದೂರಿನಂತೆ, ಮಾಲಾಡಿ ಗ್ರಾಮದ ಮಡಂತ್ಯಾರು ನಾವುಂಡ ಕಡೆಗೆ ಹೋಗುವ ರಸ್ತೆಯಲ್ಲಿ ಅಡಕೆ ವ್ಯಾಪಾರ ಅಂಗಡಿಯನ್ನು ನಡೆಸುತ್ತಿದ್ದು,ಜ.1 ರಂದು ಬೆಳಿಗ್ಗೆ ಅಂಗಡಿಯಲ್ಲಿ ಕೆಲಸ ಮಾಡುವ ಇಸ್ಮಾಯಿಲ್‌ ಎಂಬವರಲ್ಲಿ ಕ್ಯಾಷ್‌ ಡ್ರಾವರ್‌ ನ ಕೀ ಯನ್ನು ನೀಡಿ, ಅನ್ಯ ಕೆಲಸದ ನಿಮಿತ್ತ ಹೊರಗೆ ಹೋಗಿರುತ್ತಾರೆ. ಮಧ್ಯಾಹ್ನ ಸಮಯ ಅಂಗಡಿಯಲ್ಲಿದ್ದ ಇಸ್ಮಾಯಿಲ್‌ ಕರೆ ಮಾಡಿ,ಇಬ್ಬರು ಅಪರಿಚಿತರು ಸ್ಕೂಟರಿನಲ್ಲಿ ಅಂಗಡಿಗೆ ಬಂದಿದ್ದು,ತನ್ನ ಗಮನ ಬೇರೆಡೆಗೆ ಸೆಳೆದು ಕ್ಯಾಷ್ ಡ್ರಾಯರ್ ನಲ್ಲಿದ್ದ ಹಣವನ್ನು ಕಳ್ಳತನ ಮಾಡಿರುತ್ತಾರೆ ಎಂಬುದಾಗಿ ತಿಳಿಸಿರುತ್ತಾರೆ.

ಮಾಲೀರು ಅಂಗಡಿಗೆ ಬಂದು ಕ್ಯಾಶ್‌ ಡ್ರಾವರ್‌ ನ್ನು ಪರಿಶೀಲಿಸಿದಾಗ ಡ್ರಾವರ್‌ ನಲ್ಲಿದ್ದ ಒಟ್ಟು 2,31,000 ರೂ.ಹಣ ಕಳವಾಗಿರುವುದು ಕಂಡುಬಂದಿರುತ್ತದೆ.ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Related posts

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

Suddi Udaya

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

Suddi Udaya

ಮುಂಡಾಜೆ : ಸೋಮಂತಡ್ಕ ನಿವಾಸಿ ಪುನೀತ್ ಕುಮಾರ್ ಎಸ್. ಹೃದಯಾಘಾತದಿಂದ ನಿಧನ

Suddi Udaya

ನ.21 : ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ಪಡ್ಯಾರಬೆಟ್ಟು ಕ್ಷೇತ್ರಕ್ಕೆ ಬೇಟಿ ನೀಡಿದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ

Suddi Udaya
error: Content is protected !!