ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಿಂದ ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಲ್ಲಿ ಡಿ.30 ರಂದು ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭವು ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾಂಪ್ಕೊ ಎಜಿಎಮ್ ಗೋವಿಂದ ಭಟ್, ಮಂಗಳೂರು ವಿಭಾಗ ರೀಜನಲ್ ಮ್ಯಾನೇಜರ್ ಚಂದ್ರ ಎಮ್, ಮುಂಡಾಜೆ ಫಾಕ್ಸ್ ಅಧ್ಯಕ್ಷ ಜನಾರ್ದನ ಗೌಡ ಹಾಗೂ ಬೆಳ್ತಂಗಡಿ ಶಾಖೆಯ ಪ್ರಬಂಧಕರಾದ ಶ್ರಿಕೃಷ್ಣ ಕೆ. ಎಸ್ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಖೆಯ ಸಿಬ್ಬಂದಿ ವರ್ಗ, ನೌಕರ ವರ್ಗದವರು ಹಾಗೂ ನಿವೃತ್ತಿ ಹೊಂದುತ್ತಿರುವ ಶ್ರೀಧರ ಕೆ. ಇವರ ಸ್ನೇಹಿತರು ಉಪಸ್ಥಿತರಿದ್ದರು.

Leave a Comment

error: Content is protected !!