ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ವೇಣೂರು : ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವೇಣೂರು ಹೊಸ ಬಸ್ಸು ತಂಗುದಾಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಶ್ರೀಮತಿ ಜಯಲಕ್ಷ್ಮಿ ಮತ್ತು ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ವೇಳೆ ಸ್ವಚ್ಚತಾ ವಾಹನದಲ್ಲಿ ಸಾಮಾಜಿಕ ಸಭೆಯ ಕುರಿತಂತೆ ಪ್ರಚಾರ ಮಾಡಲಾಯಿತು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರಾದ ನೇಮಯ್ಯ ಕುಲಾಲ್,ಗ್ರಾ.ಪಂ ಸದಸ್ಯರು, ಗ್ರಾ.ಪಂ ಕಾರ್ಯದರ್ಶಿ ವನಜ , ದ್ವಿತೀಯ ಲೆಕ್ಕ ಸಹಾಯಕರು ರಾಜು, ಗ್ರಾ.ಪಂ ಸಿಬ್ಬಂದಿಗಳಾದ ನಾರ್ಣಪ್ಪ ಗೌಡ, ರಮೇಶ್ ನಾಯ್ಕ್, ಶ್ರೀಮತಿ ಚಂದ್ರಾವತಿ, ಶ್ರೀಮತಿ ಭವ್ಯ,ಗ್ರಾಮ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಹರಿಣಿ ಉಪಸ್ಥಿತರಿದ್ದರು.

Leave a Comment

error: Content is protected !!