32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಪಂಚಾಯತ್ ನ ತ್ಯಾಜ್ಯ ನಿರ್ವಹಣಾ ಘಟಕ ಹಾಗೂ ಗ್ರಂಥಾಲಯಕ್ಕೆ ಎನ್ನೆಸ್ಸೆಸ್ ಸ್ವಯಂ ಸೇವಕರ ಭೇಟಿ

ಉಜಿರೆ : ಉಜಿರೆ ಪಂಚಾಯತ್ ಇದರ ತ್ಯಾಜ್ಯ ಘಟಕವು ಅತ್ಯಂತ ವ್ಯವಸ್ಥಿತವಾಗಿ ಕಾರ್ಯ ಮಾಡುತ್ತಿದ್ದು , ಅಲ್ಲಿನ ತ್ಯಾಜ್ಯ ವಿಲೇವಾರಿ ನಿರ್ವಹಣೆಯ ಬಗ್ಗೆ ತಿಳಿಯಲು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಕಸ ಕೇವಲ ಕಸವಲ್ಲ – ರಸ ಎನ್ನುವ ತ್ಯಾಜ್ಯ ನಿರ್ವಹಣೆಯ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಭೇಟಿ ನೀಡಿದರು.

ಪ್ರಸ್ತುತ ರಿಪ್ಲಾಸ್ಟಿಕೊ ಎನ್ನುವ ಖಾಸಗಿ ಕಂಪನಿಯ ವತಿಯಿಂದ ಪ್ಲಾಸ್ಟಿಕ್ ಚೀಲ ಇತ್ಯಾದಿಗಳಿಂದ ಇಂಟರ್ ಲಾಕ್ ಟೈಲ್ಸ್ ಉತ್ಪಾದನೆ ಮಾಡಲಾಗುತ್ತಿದೆ. ಉಳಿದ ತ್ಯಾಜ್ಯಗಳನ್ನು ಬೇರ್ಪಡಿಸಿ ವಿವಿಧ ಉಪಯೋಗ ಪಡೆಯಲಾಗುತ್ತಿದೆ. ಹಸಿ ಕಸಗಳಿಂದ ಗೊಬ್ಬರ ಮಾಡಲಾಗುತ್ತಿದೆ.

ರಿಪ್ಲಾಸ್ಟಿಕೊ ಕಂಪೆನಿಯ ಪ್ರಬಂಧಕ ಕಾರ್ತಿಕ್ ಅವರು ಪ್ಲಾಸ್ಟಿಕ್ ತ್ಯಾಜ್ಯಗಳ ವಿಲೇವಾರಿ ಹಾಗೂ ಇಂಟರ್ ಲಾಕ್ ಟೈಲ್ಸ್ ಗಳ ತಯಾರಿಕೆಯ ವಿವಿಧ ಹಂತಗಳ ಮಾಹಿತಿ ನೀಡಿದರು. ಸಿಬಂದಿಗಳಾದ ಲೀಲಾ ಹಾಗೂ ಶುಭಾ ಅವರು ಸಹಕರಿಸಿದರು.

ಇದೇ ಸಂದರ್ಭದಲ್ಲಿ ಉಜಿರೆಯ ಪಂಚಾಯತ್ ನ ಗ್ರಂಥಾಲಯ ಹಾಗೂ ಕೂಸಿನ ಮನೆಗೆ ಭೇಟಿ ನೀಡಲಾಯಿತು. ಅಧ್ಯಕ್ಷೆ ಉಷಾಕಿರಣ ಕಾರಂತ್ , ಉಪಾಧ್ಯಕ್ಷರಾದ ರವಿಕುಮಾರ್ ಬರಮೇಲು ಹಾಗೂ ಗ್ರಾಮಾಭಿವೃದ್ಧಿ ಅಧಿಕಾರಿ ಪ್ರಕಾಶ್ ನೊಚ್ಚ ಮಾರ್ಗದರ್ಶನ ಮಾಡಿದರು.
ರಾ.ಸೇ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಇವರ ನೇತೃತ್ವದಲ್ಲಿ ಘಟಕದ ನಾಯಕರಾದ ಸುದರ್ಶನ ನಾಯಕ್ ಹಾಗೂ ದಕ್ಷಾ ಕಾರ್ಯಕ್ರಮ ಸಂಘಟಿಸಿದರು.
ಸ್ವಯಂ ಸೇವಕಿ ಅಕ್ಷತಾ ಎಂ ಜಿ ನಿರೂಪಿಸಿದರು. ಸಮ್ಮೆದ್ ಸ್ವಾಗತಿಸಿ, ವಂದಿಸಿದರು.

Related posts

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ಡಿ:7ರಂದು ಬೆಳ್ತಂಗಡಿಯಲ್ಲಿ 12ನೇ ವರ್ಷದ ಕೋಟಿ- ಚೆನ್ನಯ ಕ್ರೀಡಾಕೂಟ

Suddi Udaya

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya

ಸ್ವರ್ಣ ಜೇಸಿ ಸಪ್ತಾಹ: ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya
error: Content is protected !!