July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ನಗದು ದೋಚಿದ ಕಳ್ಳರು: ಮಾಲಾಡಿ ಪುಷ್ಪರಾಜ ಹೆಗ್ಡೆಯವರ ಅಡಕೆ ವ್ಯಾಪಾರ ಅಂಗಡಿಯಿಂದ ರೂ. 2.31 ಲಕ್ಷ ಕಳವು

ಮಡಂತ್ಯಾರು: ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಅಪರಿಚಿತರು ಲಕ್ಷಾಂತರ ನಗದು ದೋಚಿದ ಘಟನೆ ಮಡಂತ್ಯಾರಿನಿಂದ ವರದಿಯಾಗಿದೆ.

ಮಾಲಾಡಿ ಗ್ರಾಮದ ಟಿ. ಪುಷ್ಪರಾಜ ಹೆಗ್ಡೆ ಎಂಬವರ ದೂರಿನಂತೆ, ಮಾಲಾಡಿ ಗ್ರಾಮದ ಮಡಂತ್ಯಾರು ನಾವುಂಡ ಕಡೆಗೆ ಹೋಗುವ ರಸ್ತೆಯಲ್ಲಿ ಅಡಕೆ ವ್ಯಾಪಾರ ಅಂಗಡಿಯನ್ನು ನಡೆಸುತ್ತಿದ್ದು,ಜ.1 ರಂದು ಬೆಳಿಗ್ಗೆ ಅಂಗಡಿಯಲ್ಲಿ ಕೆಲಸ ಮಾಡುವ ಇಸ್ಮಾಯಿಲ್‌ ಎಂಬವರಲ್ಲಿ ಕ್ಯಾಷ್‌ ಡ್ರಾವರ್‌ ನ ಕೀ ಯನ್ನು ನೀಡಿ, ಅನ್ಯ ಕೆಲಸದ ನಿಮಿತ್ತ ಹೊರಗೆ ಹೋಗಿರುತ್ತಾರೆ. ಮಧ್ಯಾಹ್ನ ಸಮಯ ಅಂಗಡಿಯಲ್ಲಿದ್ದ ಇಸ್ಮಾಯಿಲ್‌ ಕರೆ ಮಾಡಿ,ಇಬ್ಬರು ಅಪರಿಚಿತರು ಸ್ಕೂಟರಿನಲ್ಲಿ ಅಂಗಡಿಗೆ ಬಂದಿದ್ದು,ತನ್ನ ಗಮನ ಬೇರೆಡೆಗೆ ಸೆಳೆದು ಕ್ಯಾಷ್ ಡ್ರಾಯರ್ ನಲ್ಲಿದ್ದ ಹಣವನ್ನು ಕಳ್ಳತನ ಮಾಡಿರುತ್ತಾರೆ ಎಂಬುದಾಗಿ ತಿಳಿಸಿರುತ್ತಾರೆ.

ಮಾಲೀರು ಅಂಗಡಿಗೆ ಬಂದು ಕ್ಯಾಶ್‌ ಡ್ರಾವರ್‌ ನ್ನು ಪರಿಶೀಲಿಸಿದಾಗ ಡ್ರಾವರ್‌ ನಲ್ಲಿದ್ದ ಒಟ್ಟು 2,31,000 ರೂ.ಹಣ ಕಳವಾಗಿರುವುದು ಕಂಡುಬಂದಿರುತ್ತದೆ.ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Related posts

ಸವಣಾಲು: ಕೋಡಿಮುಗೇರು ಶ್ರೀ ಬ್ರಹ್ಮಮುಗೇರ ಗುಳಿಗ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಪುನರ್ ಪ್ರತಿಷ್ಠಾಪನ : ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕುರಿತಾದ ಕಾರ್ಯಾಗಾರ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘವು ವರದಿ ಸಾಲಿನಲ್ಲಿ ರೂ.359 ಕೋಟಿ ವ್ಯವಹಾರ ನಡೆಸಿ,ರೂ.1.00 ಕೋಟಿ ಲಾಭ ಗಳಿಸಿದೆ,ಸದಸ್ಯರಿಗೆ ಶೇ.20 ನೀಡಲಾಗುವುದು:ಸತೀಶ್ ಕಾಶಿಪಟ್ಣ

Suddi Udaya
error: Content is protected !!