25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭೂಸೇನೆಯಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿದ್ದ ಸೋಮಂತಡ್ಕ ನಿವಾಸಿ ಫ್ರಾನ್ಸಿಸ್ ಜೆ. ನಿವೃತ್ತಿ‌

ಬೆಳ್ತಂಗಡಿ: ಮೂಲತಃ ಧರ್ಮಸ್ಥಳ ಗ್ರಾಮದ ನೇರ್ತನೆ ನಿವಾಸಿ, ಪ್ರಸ್ತುತ ಸೋಮಂತಡ್ಕ ದಲ್ಲಿ ನೆಲೆಸಿರುವ ಭೂ ಸೇನೆಯ ಯೋಧ ಫ್ರಾನ್ಸಿಸ್ ಜೆ ಅವರು ಭಾರತೀಯ ಭೂ ಸೇನೆಯಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿ ಡಿ.31 ರಂದು ನಿವೃತ್ತರಾಗಿದ್ದಾರೆ‌.


ಧರ್ಮಸ್ಥಳದ ಎಬ್ರಿಯಲ್ ಇ.ಎಮ್ ಮತ್ತು ಇ.ಎಮ್ ಮೋರಿ ದಂಪತಿಯ ಪುತ್ರರಾಗಿರುವ ಅವರು ಎಸ್‌ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪೂರೈಸಿ, ಮುಂಡಾಜೆ ಪ.ಪೂ ಕಾಲೇಜಿನಲ್ಲಿ ಪ.ಪೂ ಶಿಕ್ಷಣ ಪಡೆದಿದ್ದಾರೆ. 2002 ರಲ್ಲಿ ಮಂಗಳೂರಿನಲ್ಲಿ ನಡೆದ ಸೇನಾ ಆಯ್ಕೆ ಶಿಬಿರದಲ್ಲಿ ನೇಮಕಾತಿ ಒಡೆದು ಅವರು ಭೋಪಾಲ್ ನಲ್ಲಿ ಇಲೆಕ್ಟ್ರಾನಿಕಲ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪೂರೈಸಿ ಅದೇ ವಿಭಾಗದಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿ ನಿವೃತ್ತರಾಗಿದ್ದಾರೆ.


ಭೋಪಾಲ್ ನಲ್ಲಿ‌ ಸಿಪಾಯಿ ಹುದ್ದೆಯಲ್ಲಿ ಸೇನಾ ತರಬೇತಿ ಮುಗಿಸಿದ್ದ ಅವರು ಮಧುರಾ(ಯು.ಪಿ), ದೆಹಲಿ, ಸಿಲಿಗುಡಿ(ಪ. ಬಂಗಾಳ), ಸಿಕಂದರಾಬಾದ್ ಶ್ರೀನಗರ, ರಾಜಸ್ಥಾನ, ಬುಜ್ (ಗುಜರಾತ್), ಇಲ್ಲೆಲ್ಲಾ ಕರ್ತವ್ಯ ಸಲ್ಲಿಸಿ ಹವಾಲ್ದಾರ್ ಹುದ್ದೆಗೇರಿ ನಿವೃತ್ತರಾಗಿದ್ದಾರೆ.


ಅವರ ಕರ್ತವ್ಯದ ಅವಧಿಯಲ್ಲಿ ಅವರಿಗೆ 9 ವರ್ಷದ ಸೇವೆಗೆ ಪದಕ, 20 ವರ್ಷ ಸೇವೆಗೆ ಪದಕ, ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ವರ್ಚದ ಪದಕ, ಶ್ರೀ ನಗರ ಆರ್ ಆರ್ ನಲ್ಲಿ ಕರ್ತವ್ಯ ಸಲ್ಲಿಸಿದ್ದಕ್ಕಾಗಿ ಪದಕ ಪುರಸ್ಕೃತರಾಗಿದ್ದಾರೆ. ಅವರು ಪತ್ನಿ ಬೀನಾ ಫ್ರಾನ್ಸಿಸ್, ಮೂವರು ಮಕ್ಕಳಾದ ಫಿಯಾ ಫ್ರಾನ್ಸಿಸ್, ಫೆಬಿನ್ ಫ್ರಾನ್ಸಿಸ್ ಮತ್ತು ಅನ್ವಿರೋಸ್ ಫ್ರಾನ್ಸಿಸ್ ಅವರ ಜೊತೆ ನಿವೃತ್ತಿಯ ಜೀವನ ಸಾಗಿಸಲಿದ್ದಾರೆ.
ಭವ್ಯ ಸ್ವಾಗತ:‌ ಅವರು ಕರ್ತವ್ಯ ಸಲ್ಲಿಸಿ ಊರಿಗೆ ಆಗಮಿಸುತ್ತಿದ್ದಂತೆ ಉಜಿರೆ ಹಾಗೂ ಸೋಮಂತಡ್ಕದಲ್ಲಿ ಭವ್ಯ ಸ್ವಾಗತ ಕೋರಲಾಯಿತು.

Related posts

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಉಜಿರೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಕಣಿಯೂರು ನಿವೃತ್ತ ಶಿಕ್ಷಕಿ ಹರ್ಷಲಾರವರಿಗೆ ಕ್ಲಸ್ಟರ್ ವತಿಯಿಂದ ಸನ್ಮಾನ

Suddi Udaya

ಭಟ್ಕಳ ಕರಿಕಲ್ ಧ್ಯಾನ ಮಂದಿರದ ಪ್ರತಿಷ್ಠಾಪನಾ ವರ್ಧಂತಿ ಉತ್ಸವ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

Suddi Udaya

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಬಂದಾರು ಗ್ರಾಮ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!