26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ

ಪೆರಾಡಿ: ಶ್ರೀ ಅಯ್ಯಪ್ಪ ಭಕ್ತ ವೃಂದ ಮಾವಿನಕಟ್ಟೆ, ಪೆರಾಡಿ ಶ್ರೀ ಅಯ್ಯಪ್ಪ ದೀಪೋತ್ಸವ ಸಮಿತಿ, ಪೆರಾಡಿ-ಮರೋಡಿ, ಕಾಶಿಪಟ್ಣ ಸಾರ್ವಜನಿಕ ಪೂಜಾ ಸಮಿತಿ, ಪೆರಾಡಿ, ಮರೋಡಿ ಮತ್ತು ವಿವಿಧ ಸಂಘ-ಸಂಸ್ಥೆಗಳ ಜಂಟಿ ಆಶ್ರಯದಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮವು ಜ 7 ರಂದು ಮಾವಿನಕಟ್ಟೆ ಪೆರಾಡಿಯಲ್ಲಿ ನಡೆಯಲಿದೆ.


ಜ.6 ರಂದು ಬೆಳಿಗ್ಗೆ 6:೦೦ಕ್ಕೆ ಗಣಹೋಮ, ಸಂಜೆ 4:೦೦ಕ್ಕೆ ಅಯ್ಯಪ್ಪ ಮಂದಿರಕ್ಕೆ ಹೊರೆಕಾಣಿಕೆ ಮೆರವಣಿಗೆ, ಸಂಜೆ 7:೦೦ರಿಂದ ತುಳುನಾಡ ಕಲಾವಿದರು ವೇಣೂರು ಇವರಿಂದ ಮನೋರಂಜನಾ ಕಾರ್ಯಕ್ರಮ “ತುಳುನಾಡ ವೈಭವ” ಜ.7 ರಂದು ಬೆಳಿಗ್ಗೆ : ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ 1:೦೦ರಿಂದ ಸಾರ್ವಜನಿಕ ಅನ್ನ ಸಂತರ್ಪಣೆ, ಅಪರಾಹ್ನ 3:೦೦ರಿಂದ ವಿಠಲ ನಾಯಕ್ ಕಲ್ಲಡ್ಕ ಇವರಿಂದ ಗೀತಾ ಸಾಹಿತ್ಯ ಸಂಭ್ರಮ,ಸಂಜೆ 5:೦೦ಕ್ಕೆ ಭಜನೆ, ಪಾಲೆಕೊಂಬು ಮೆರವಣಿಗೆ, ರಾತ್ರಿ 8:೦೦ರಿಂದ ಸಾರ್ವಜನಿಕ ದೀಪೋತ್ಸವ, ರಾತ್ರಿ 8:30ರಿಂದ ಧಾರ್ಮಿಕ ಸಭೆ,ರಾತ್ರಿ 9:30ರಿಂದ ಸಾರ್ವಜನಿಕ ಅನ್ನಸಂತರ್ಪಣೆ ರಾತ್ರಿ 10.00ರಿಂದ ಅಗ್ನಿ ಸ್ಪರ್ಶ, ರಾತ್ರಿ 11.00 ಯಕ್ಷಗಾನ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಬಯಲಾಟ “ಶಬರಿಮಲೆ ಅಯ್ಯಪ್ಪ “ಬೆಳಿಗ್ಗೆ ಗಂಟೆ 4:೦೦ರಿಂದ : ಕೆಂಡಸೇವೆ,

ಜ.11 ರಂದು ಗುರುವಾರ ಬೆಳಿಗ್ಗೆ ಅಯ್ಯಪ್ಪ ದೇವರಿಗೆ ಆರತಿ, ಸ್ವಾಮಿಗಳ ಇರುಮುಡಿ ಕಟ್ಟುವುದು ಮತ್ತು ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ನಾರಾಯಣ ಶೆಟ್ಟಿ ಎಂ.ಎಸ್ ತಿಳಿಸಿದ್ದಾರೆ.

Related posts

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ವೇಣೂರು: ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನೂರುಲ್ ಹುದಾ ದರ್ಸ್ ಪ್ರಾರಂಭೋತ್ಸವ

Suddi Udaya

ಸಹಕಾರ ಸಂಘಗಳ ಅಧಿಕಾರಕ್ಕೆ ತಡೆ ನೀಡಿದ್ದ ಸರಕಾರದ ಸುತ್ತೋಲೆಗೆ ಹೈಕೋರ್ಟ್ ತಡೆಯಾಜ್ಞೆ

Suddi Udaya

ದ.ಕ. ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್ 4ಜಿ ಸೇವೆ

Suddi Udaya

ನಿಡ್ಲೆ ಗ್ರಾ.ಪಂ ನ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

Suddi Udaya
error: Content is protected !!