22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ

ಪೆರಾಡಿ: ಶ್ರೀ ಅಯ್ಯಪ್ಪ ಭಕ್ತ ವೃಂದ ಮಾವಿನಕಟ್ಟೆ, ಪೆರಾಡಿ ಶ್ರೀ ಅಯ್ಯಪ್ಪ ದೀಪೋತ್ಸವ ಸಮಿತಿ, ಪೆರಾಡಿ-ಮರೋಡಿ, ಕಾಶಿಪಟ್ಣ ಸಾರ್ವಜನಿಕ ಪೂಜಾ ಸಮಿತಿ, ಪೆರಾಡಿ, ಮರೋಡಿ ಮತ್ತು ವಿವಿಧ ಸಂಘ-ಸಂಸ್ಥೆಗಳ ಜಂಟಿ ಆಶ್ರಯದಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ ಕಾರ್ಯಕ್ರಮವು ಜ 7 ರಂದು ಮಾವಿನಕಟ್ಟೆ ಪೆರಾಡಿಯಲ್ಲಿ ನಡೆಯಲಿದೆ.


ಜ.6 ರಂದು ಬೆಳಿಗ್ಗೆ 6:೦೦ಕ್ಕೆ ಗಣಹೋಮ, ಸಂಜೆ 4:೦೦ಕ್ಕೆ ಅಯ್ಯಪ್ಪ ಮಂದಿರಕ್ಕೆ ಹೊರೆಕಾಣಿಕೆ ಮೆರವಣಿಗೆ, ಸಂಜೆ 7:೦೦ರಿಂದ ತುಳುನಾಡ ಕಲಾವಿದರು ವೇಣೂರು ಇವರಿಂದ ಮನೋರಂಜನಾ ಕಾರ್ಯಕ್ರಮ “ತುಳುನಾಡ ವೈಭವ” ಜ.7 ರಂದು ಬೆಳಿಗ್ಗೆ : ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ 1:೦೦ರಿಂದ ಸಾರ್ವಜನಿಕ ಅನ್ನ ಸಂತರ್ಪಣೆ, ಅಪರಾಹ್ನ 3:೦೦ರಿಂದ ವಿಠಲ ನಾಯಕ್ ಕಲ್ಲಡ್ಕ ಇವರಿಂದ ಗೀತಾ ಸಾಹಿತ್ಯ ಸಂಭ್ರಮ,ಸಂಜೆ 5:೦೦ಕ್ಕೆ ಭಜನೆ, ಪಾಲೆಕೊಂಬು ಮೆರವಣಿಗೆ, ರಾತ್ರಿ 8:೦೦ರಿಂದ ಸಾರ್ವಜನಿಕ ದೀಪೋತ್ಸವ, ರಾತ್ರಿ 8:30ರಿಂದ ಧಾರ್ಮಿಕ ಸಭೆ,ರಾತ್ರಿ 9:30ರಿಂದ ಸಾರ್ವಜನಿಕ ಅನ್ನಸಂತರ್ಪಣೆ ರಾತ್ರಿ 10.00ರಿಂದ ಅಗ್ನಿ ಸ್ಪರ್ಶ, ರಾತ್ರಿ 11.00 ಯಕ್ಷಗಾನ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ಬಯಲಾಟ “ಶಬರಿಮಲೆ ಅಯ್ಯಪ್ಪ “ಬೆಳಿಗ್ಗೆ ಗಂಟೆ 4:೦೦ರಿಂದ : ಕೆಂಡಸೇವೆ,

ಜ.11 ರಂದು ಗುರುವಾರ ಬೆಳಿಗ್ಗೆ ಅಯ್ಯಪ್ಪ ದೇವರಿಗೆ ಆರತಿ, ಸ್ವಾಮಿಗಳ ಇರುಮುಡಿ ಕಟ್ಟುವುದು ಮತ್ತು ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ನಾರಾಯಣ ಶೆಟ್ಟಿ ಎಂ.ಎಸ್ ತಿಳಿಸಿದ್ದಾರೆ.

Related posts

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಡಿ.8 (ನಾಳೆ) 11ನೇ ವರ್ಷದ ಪಾದಯಾತ್ರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಧ್ಯಾಹ್ನ 3 ಕ್ಕೆ ಪಾದಯಾತ್ರೆಗೆ ಚಾಲನೆ

Suddi Udaya

ದಯಾ ವಿಶೇಷ ಮಕ್ಕಳ ಮುಂದಿನ ಭವಿಷ್ಯ ನಿರ್ಮಾಣಕ್ಕಾಗಿ ಡಿ.29 ರಂದು ಹೋಲಿ ರೆಡಿಮರ್ ಚರ್ಚ್ ವಠಾರದಲ್ಲಿ ದಯಾ ಫಿಯೆಸ್ತಾ-2024

Suddi Udaya

ಕಾವಳಕಟ್ಟೆ ವಲಯ ಬಂಟರ ಸಂಘದಿಂದ ಸಮಾಜಮುಖಿ ಚಿಂತನಾ ಕಾರ್ಯಕ್ರಮ

Suddi Udaya

ಮಡಂತ್ಯಾರು: ಬಂಗೇರಕಟ್ಟ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದ ಮಕ್ಕಳ ಬಾಲ ಮೇಳ ಕಾರ್ಯಕ್ರಮ

Suddi Udaya

ನಿಡ್ಲೆ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!