July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

ಉಜಿರೆ : ಜಾಗೃತಿ ಸಪ್ತಾಹದ ಅಂಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ವಿಶೇಷ ಚೇತನ – ವಿಶಿಷ್ಠ ಚೇತನ ಎಂಬ ಜಾಗೃತಿಯ ಸಂದೇಶದೊಂದಿಗೆ ಉಜಿರೆಯ ಸಾನಿಧ್ಯ ವಿಶೇಷ ಮಕ್ಕಳ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕುವುದರೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಸಂಘಟಿಸಿದರು.
ಕೇಂದ್ರದ ಮೇಲ್ವಿಚಾರಕಿ ಮಲ್ಲಿಕಾ ಹಾಗೂ ಸಿಬಂದಿಯವರು ಕೇಂದ್ರದ ಹಾಗೂ ಅಲ್ಲಿನ ಮಕ್ಕಳ ವಿಶೇಷತೆ ಬಗ್ಗೆ ಮಾಹಿತಿ ನೀಡಿದರು.

ರಾ.ಸೇ . ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ನೇತೃತ್ವದಲ್ಲಿ ಘಟಕದ ನಾಯಕರಾದ ಸುದರ್ಶನ ನಾಯಕ್ ಹಾಗೂ ದಕ್ಷಾ ಕಾರ್ಯಕ್ರಮ ಸಂಘಟಿಸಿದರು.
ಡಯಾನಾ ಸ್ವಾಗತಿಸಿ, ಭೂಮಿಕಾ ವಂದಿಸಿದರು. ಅಕ್ಷತಾ ಎಂ ಜಿ ನಿರೂಪಿಸಿದರು.

Related posts

ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳ ರ‍್ಯಾಂಕ್ ಸಾಧನೆ

Suddi Udaya

ಉಜಿರೆ ಶ್ರೀ ಧ. ಮಂ.ಪದವಿ ಪೂರ್ವ ಕಾಲೇಜಿನಲ್ಲಿ “ಭಿತ್ತಿಪತ್ರಿಕೆ ಅನಾವರಣ”

Suddi Udaya

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕರವರಿಗೆ ಆರ್ಥಿಕ ಧನಸಹಾಯ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

Suddi Udaya
error: Content is protected !!