25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

ಬೆಳ್ತಂಗಡಿ; ದೂರದ ಅಮೇರಿಕಾದಲ್ಲಿ ನೆಲೆಸಿದರೂ ತಮ್ಮ ಗೃಹ ಪ್ರವೇಶ ಸಂದರ್ಭದಲ್ಲಿ ಭಾರತೀಯ ಸಂಸ್ಕಾರ, ಸಂಸ್ಕೃತಿಯನ್ನು ಬಿಡದೆ ಹೊರದೇಶದಲ್ಲಿಯೂ ಕಟ್ಟುಪಾಡು ಪಾಲಿಸುವ ಮೂಲಕ ಉಜಿರೆಯ ದೀಪ್ತಿ ಕಾಂಚೋಡು ಮತ್ತು ಡಾ‌. ಶುಭಮಯಿ ಚಟರ್ಜಿ ಅವರು ಸನಾತನ ಧರ್ಮ ಸಂಸ್ಕೃತಿಯನ್ನು ಎತ್ತಿಹಿಡಿದ್ದಾರೆ‌.

ಡಿ.29 ರಂದು ಅಮೇರಿಕಾದ ಕೊಲೆರೋಡದಲ್ಲಿ ನಡೆದ ನೂತನ ಗೃಹ ಪ್ರವೇಶದ ಕಾರ್ಯಕ್ರಮ ಸಂಪೂರ್ಣವಾಗಿ ಭಾರತೀಯ ಪೂಜಾ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು. ಇದು ಅಲ್ಲಿನ ಜನರ ಪ್ರೀತಿ ವಿಶ್ವಾಸವನ್ನೂ ಗಳಿಸಿ ಕೊಂಡದ್ದಲ್ಲದೆ ಅಭಿಮಾನ ಮೆರೆಯುವಂತೆ ಮಾಡಿತು.


ಗೃಹ ಪ್ರವೇಶದ ಸಂಪ್ರದಾಯದಂತೆ ಹಿಂದಿನ ದಿನ ವಾಸ್ತು ಹೋಮ, ಮರು ದಿನ ಗಣಪತಿ ಹವನ, ಶ್ರೀ ಸತ್ಯನಾರಾಯಣ ಪೂಜೆ ಇತ್ಯಾದಿ ದೇವತಾ ಕಾರ್ಯಕ್ರಮಗಳು ನಡೆದವು. ಉಡುಪಿ ಪುತ್ತಿಗೆ ಮಠದ ಅಮೇರಿಕದ ಶಾಖೆಯ ಪುರೋಹಿತ ವಾದಿರಾಜ ಭಟ್ಟರು ನೇತೃತ್ವ ನೀಡಿದರು. ಈ ವೇಳೆ ಆಹ್ವಾನಿತ ವಿದೇಶಿ ಪ್ರಜೆಗಳು ಮುಖ್ಯವಾಗಿ ನಮ್ಮ ದೇಶದ ಧಾರ್ಮಿಕ ವಿಧಿ ವಿಧಾನಗಳನ್ನು ಗೌರವ ಭಾವದಿಂದ ಕಣ್ತುಂಬಿಕೊಂಡರು. ಅತಿಥ್ಯ ಸ್ವೀಕರಿಸುದರೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.

ದೀಪ್ತಿ ಕಾಂಚೋಡು ಅವರು ಉಜಿರೆಯ ಮಾಜಿ ಯೋಧ ಲ. ಡಾ. ಗೋಪಾಲಕೃಷ್ಣ ಭಟ್ ಕಾಂಚೋಡು ಮತ್ತು ಸುಲೋಚನಾ ಕಾಂಚೋಡು ದಂಪತಿಯ ಪುತ್ರಿ. ಎಂಎಸ್ಸಿ ಪದವೀಧರೆಯಾಗಿರುವ ದೀಪ್ತಿ ಅವರು ಅಮೇರಿಕಾದಲ್ಲಿ ವೃತ್ತಿಯಲ್ಲಿದ್ದಾರೆ ಅವರ ಪತಿ ಡಾ.‌ಶುಭಮಯಿ ಚಟರ್ಜಿ ಅವರು ವಿಜ್ಞಾನಿಯಾಗಿ ಉದ್ಯೋಗದಲ್ಲಿದ್ದಾರೆ.

Related posts

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಪಣಕಜೆ : ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರೋಟರಿ ಕ್ಲಬ್ ಮಡಂತ್ಯಾರು ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!