32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

ಬೆಳ್ತಂಗಡಿ; ದೂರದ ಅಮೇರಿಕಾದಲ್ಲಿ ನೆಲೆಸಿದರೂ ತಮ್ಮ ಗೃಹ ಪ್ರವೇಶ ಸಂದರ್ಭದಲ್ಲಿ ಭಾರತೀಯ ಸಂಸ್ಕಾರ, ಸಂಸ್ಕೃತಿಯನ್ನು ಬಿಡದೆ ಹೊರದೇಶದಲ್ಲಿಯೂ ಕಟ್ಟುಪಾಡು ಪಾಲಿಸುವ ಮೂಲಕ ಉಜಿರೆಯ ದೀಪ್ತಿ ಕಾಂಚೋಡು ಮತ್ತು ಡಾ‌. ಶುಭಮಯಿ ಚಟರ್ಜಿ ಅವರು ಸನಾತನ ಧರ್ಮ ಸಂಸ್ಕೃತಿಯನ್ನು ಎತ್ತಿಹಿಡಿದ್ದಾರೆ‌.

ಡಿ.29 ರಂದು ಅಮೇರಿಕಾದ ಕೊಲೆರೋಡದಲ್ಲಿ ನಡೆದ ನೂತನ ಗೃಹ ಪ್ರವೇಶದ ಕಾರ್ಯಕ್ರಮ ಸಂಪೂರ್ಣವಾಗಿ ಭಾರತೀಯ ಪೂಜಾ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು. ಇದು ಅಲ್ಲಿನ ಜನರ ಪ್ರೀತಿ ವಿಶ್ವಾಸವನ್ನೂ ಗಳಿಸಿ ಕೊಂಡದ್ದಲ್ಲದೆ ಅಭಿಮಾನ ಮೆರೆಯುವಂತೆ ಮಾಡಿತು.


ಗೃಹ ಪ್ರವೇಶದ ಸಂಪ್ರದಾಯದಂತೆ ಹಿಂದಿನ ದಿನ ವಾಸ್ತು ಹೋಮ, ಮರು ದಿನ ಗಣಪತಿ ಹವನ, ಶ್ರೀ ಸತ್ಯನಾರಾಯಣ ಪೂಜೆ ಇತ್ಯಾದಿ ದೇವತಾ ಕಾರ್ಯಕ್ರಮಗಳು ನಡೆದವು. ಉಡುಪಿ ಪುತ್ತಿಗೆ ಮಠದ ಅಮೇರಿಕದ ಶಾಖೆಯ ಪುರೋಹಿತ ವಾದಿರಾಜ ಭಟ್ಟರು ನೇತೃತ್ವ ನೀಡಿದರು. ಈ ವೇಳೆ ಆಹ್ವಾನಿತ ವಿದೇಶಿ ಪ್ರಜೆಗಳು ಮುಖ್ಯವಾಗಿ ನಮ್ಮ ದೇಶದ ಧಾರ್ಮಿಕ ವಿಧಿ ವಿಧಾನಗಳನ್ನು ಗೌರವ ಭಾವದಿಂದ ಕಣ್ತುಂಬಿಕೊಂಡರು. ಅತಿಥ್ಯ ಸ್ವೀಕರಿಸುದರೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.

ದೀಪ್ತಿ ಕಾಂಚೋಡು ಅವರು ಉಜಿರೆಯ ಮಾಜಿ ಯೋಧ ಲ. ಡಾ. ಗೋಪಾಲಕೃಷ್ಣ ಭಟ್ ಕಾಂಚೋಡು ಮತ್ತು ಸುಲೋಚನಾ ಕಾಂಚೋಡು ದಂಪತಿಯ ಪುತ್ರಿ. ಎಂಎಸ್ಸಿ ಪದವೀಧರೆಯಾಗಿರುವ ದೀಪ್ತಿ ಅವರು ಅಮೇರಿಕಾದಲ್ಲಿ ವೃತ್ತಿಯಲ್ಲಿದ್ದಾರೆ ಅವರ ಪತಿ ಡಾ.‌ಶುಭಮಯಿ ಚಟರ್ಜಿ ಅವರು ವಿಜ್ಞಾನಿಯಾಗಿ ಉದ್ಯೋಗದಲ್ಲಿದ್ದಾರೆ.

Related posts

ಕಳೆಂಜ ದೇವಸ್ಥಾನದಲ್ಲಿ ಬೃಹತ್ ನೇಜಿ ನಾಟಿ ಕಾರ್ಯಕ್ರಮ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ತೇರ್ಗಡೆ

Suddi Udaya

ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ 50 ನೇ ವರ್ಷದ ಸಂಭ್ರಮಾಚರಣೆ

Suddi Udaya

ಉಜಿರೆ: ಕುಂಜರ್ಪ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಅಂಡಿಂಜೆ: 31ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಆರ್ಯಭಟ ಪ್ರಶಸ್ತಿ ಪುರಸ್ಕೃತ ದೇವೇಂದ್ರ ಹೆಗ್ಡೆ ಕೊಕ್ರಾಡಿ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕಾರ

Suddi Udaya
error: Content is protected !!